ದೇಶ- ವಿದೇಶ

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.

ಎಲ್‌ಪಿಜಿ ಸಿಲಿಂಡರ್‌ ಕೊರತೆಯಾಗಿಲ್ಲ. ದೇಶದ ಕಚ್ಚಾ ತೈಲ ಸರಬರಾಜು ಸುಸ್ಥಿತಿಯಲ್ಲಿದೆ. ಕೆಲ ದಿನಗಳಲ್ಲಿ ಎಲ್ಲವೂ ಯಥಸ್ಥಿತಿಗೆ ಬರಲಿದೆ. ಆತಂಕದಿಂದ ಜನರು ಹೆಚ್ಚುವರಿ ಸಿಲಿಂಡರ್‌ಗಳನ್ನು ಬುಕ್ಕಿಂಗ್‌ ಮಾಡುತ್ತಿದ್ದಾರೆ. ಜನರು ಭಯದಿಂದ ಬುಕ್ಕಿಂಗ್‌ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ಮನವಿ ಮಾಡಿದೆ. ಮುಂದುವರೆದು ನಿತ್ಯ 50 ಲಕ್ಷ ಸಿಲಿಂಡರ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದೆ.

ಏಕಾಏಕಿ ಬುಕ್ಕಿಂಗ್‌ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಗುವ ತೊಂದರೆಯನ್ನು ತಪ್ಪಿಸಲು, ಗೃಹ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ ಫಲಾನುಭವಿಗಳ ಪಟ್ಟಿ ತಯಾರು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಇದರಿಂದ, ಆದ್ಯತೆಯ ಅನುಸಾರ ಸಿಲಿಂಡರ್‌ ವಿತರಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯದ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago