ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.
ಎಲ್ಪಿಜಿ ಸಿಲಿಂಡರ್ ಕೊರತೆಯಾಗಿಲ್ಲ. ದೇಶದ ಕಚ್ಚಾ ತೈಲ ಸರಬರಾಜು ಸುಸ್ಥಿತಿಯಲ್ಲಿದೆ. ಕೆಲ ದಿನಗಳಲ್ಲಿ ಎಲ್ಲವೂ ಯಥಸ್ಥಿತಿಗೆ ಬರಲಿದೆ. ಆತಂಕದಿಂದ ಜನರು ಹೆಚ್ಚುವರಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿದ್ದಾರೆ. ಜನರು ಭಯದಿಂದ ಬುಕ್ಕಿಂಗ್ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ಮನವಿ ಮಾಡಿದೆ. ಮುಂದುವರೆದು ನಿತ್ಯ 50 ಲಕ್ಷ ಸಿಲಿಂಡರ್ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದೆ.
ಏಕಾಏಕಿ ಬುಕ್ಕಿಂಗ್ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಗುವ ತೊಂದರೆಯನ್ನು ತಪ್ಪಿಸಲು, ಗೃಹ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಫಲಾನುಭವಿಗಳ ಪಟ್ಟಿ ತಯಾರು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಇದರಿಂದ, ಆದ್ಯತೆಯ ಅನುಸಾರ ಸಿಲಿಂಡರ್ ವಿತರಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯದ ತಿಳಿಸಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…