ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.
ಎಲ್ಪಿಜಿ ಸಿಲಿಂಡರ್ ಕೊರತೆಯಾಗಿಲ್ಲ. ದೇಶದ ಕಚ್ಚಾ ತೈಲ ಸರಬರಾಜು ಸುಸ್ಥಿತಿಯಲ್ಲಿದೆ. ಕೆಲ ದಿನಗಳಲ್ಲಿ ಎಲ್ಲವೂ ಯಥಸ್ಥಿತಿಗೆ ಬರಲಿದೆ. ಆತಂಕದಿಂದ ಜನರು ಹೆಚ್ಚುವರಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿದ್ದಾರೆ. ಜನರು ಭಯದಿಂದ ಬುಕ್ಕಿಂಗ್ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ಮನವಿ ಮಾಡಿದೆ. ಮುಂದುವರೆದು ನಿತ್ಯ 50 ಲಕ್ಷ ಸಿಲಿಂಡರ್ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದೆ.
ಏಕಾಏಕಿ ಬುಕ್ಕಿಂಗ್ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಗುವ ತೊಂದರೆಯನ್ನು ತಪ್ಪಿಸಲು, ಗೃಹ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಫಲಾನುಭವಿಗಳ ಪಟ್ಟಿ ತಯಾರು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಇದರಿಂದ, ಆದ್ಯತೆಯ ಅನುಸಾರ ಸಿಲಿಂಡರ್ ವಿತರಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯದ ತಿಳಿಸಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…