ದೇಶ- ವಿದೇಶ

ಪ್ರಧಾನಿ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ ಟ್ರಂಪ್‌ ನಡುವೆ ಮತ್ತೆ ಮೂಡಲಿದೆ ಸ್ನೇಹ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವೆ ಮತ್ತೆ ಸ್ನೇಹ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೋದಿ ಜೊತೆ ಸದಾಕಾಲ ಸ್ನೇಹಿತನಾಗಿರುತ್ತೇನೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಭಾವನೆಗಳು ಮತ್ತು ನಮ್ಮ ಸಂಬಂಧಗಳ ಬಗ್ಗೆ ಅವರ ಸಕಾರಾತ್ಮಕ ಮೌಲ್ಯಮಾಪನವನ್ನು ನಾನು ತುಂಬಾ ಗೌರವಿಸುತ್ತೇನೆ. ಅವರ ಭಾವನೆಯು ಸಂಪೂರ್ಣವಾಗಿ ಪರಸ್ಪರ ಪೂರಕವಾಗಿದೆ. ಭಾರತ ಹಾಗೂ ಅಮೇರಿಕಾಗಳು ಬಹಳ ಸಕಾರಾತ್ಮಕ ಮತ್ಯು ಭವಿಷ್ಯದ ದೃಷ್ಟಿಕೋನದ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಡೊನಾಲ್ಡ್‌ ಟ್ರಂಪ್‌ ಹಾಗೂ POTUS ಅವರನ್ನು ಟ್ಯಾಗ್‌ ಮಾಡಿ ಈ ಪೋಸ್ಟ್‌ ಹಾಕಿದ್ದು, ಈ ಪೋಸ್ಟ್‌ ಭಾರೀ ವೈರಲ್‌ ಆಗುತ್ತಿದೆ.

ಈ ಮೂಲಕ ಭಾರತ ಹಾಗೂ ಅಮೇರಿಕಾ ನಡುವೆ ಶುರುವಾಗಿದ್ದ ಸುಂಕಾಸ್ತ್ರದ ಕಾರ್ಮೋಡ ಅಂತ್ಯಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

14 mins ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

25 mins ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

47 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

5 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

5 hours ago