ದೇಶ- ವಿದೇಶ

ಉಗ್ರರನ್ನು ಹುಡುಕಿ, ಹುಡುಕಿ ಹೊಡೆಯುತ್ತೇವೆ: ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ

ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನೇರಾನೇರ ಎಚ್ಚರಿಕೆ ಕೊಟ್ಟಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಕಳೆದ ಮಂಗಳವಾರ ನಡೆದ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಪ್ರಧಾನಿಯವರಿಂದ ಈ ಎಚ್ಚರಿಕೆ ಸಂದೇಶ ಬಂದಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ದೇಶದ ಒಳಗಡೆ ಮೋದಿಯವರ ಭಾಷಣ ಹಿಂದಿಯಲ್ಲಿರುತ್ತದೆ. ಆದರೆ ಉಗ್ರರಿಗೆ ಎಚ್ಚರಿಕೆ ನೀಡುವಾಗ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಕಟು ಸಂದೇಶ ರವಾನಿಸಿದ್ದು ವಿಶೇಷವಾಗಿತ್ತು.

ಇದು ಕೇವಲ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲ. ಭಾರತದ ಆತದ ಮೇಲೆ ನಡೆದಿರುವ ದಾಳಿಯಾಗಿದೆ. ಬಿಹಾರದ ನೆಲದಲ್ಲಿ ನಿಂತು ನಾನು ಹೇಳುತ್ತಿದ್ದೇನೆ. ಅಮಾಯಕರನ್ನು ಹತ್ಯೆ ಗೈದಿರುವ ಉಗ್ರರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ತಕ್ಕಶಾಸ್ತಿ ಆಗಲಿದೆ ಎಂದು ಗುಡುಗಿದರು.

ನಾನು ಈ ಜಗತ್ತಿಗೆ ಸ್ಪಷ್ಟವಾದ ಸಂದೇಶ ಕೊಡಲು ಬಯಸುತ್ತೇನೆ. ಅಮಾಯಕರನ್ನು ಕೊಂದಿರುವವರಿಗೆ ಮುಟ್ಟಿ ನೋಡಿಕೊಳ್ಳುವಂತಹ ಶಿಕ್ಷೆಯಾಗಲಿದೆ. ಪಹಲ್ಗಾಮ್‍ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂದು ಗುಡುಗಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

5 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

7 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

7 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

7 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago