ದೇಶ- ವಿದೇಶ

ನಿತೀಶ್ ಮತ್ತೆ ಬಿಹಾರ್ ಸಿಎಂ?

ಪಾಟ್ನಾ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ, ಮಾಡಲು ಎನ್‌ಡಿಎ ತೀರ್ಮಾನಿಸಿದೆ.

ದಿಲ್ಲಿ ರಾಜಕಾರಣ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಮೈತ್ರಿ ಪಕ್ಷಗಳನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಸ್ಥಾನಗಳಲ್ಲಿ ದೊಡ್ಡಣ್ಣನಾಗಿದ್ದರೂ ತಮ್ಮನಂತಿರುವ ಸಂ.ದಳಕ್ಕೆ ಸಿಎಂ ಸ್ಥಾನ ಬಿಟ್ಟುಕೊಡಲು ಸಮ್ಮತಿಸಿದೆ. ಬಿಹಾರದಲ್ಲಿ ಉಲ್ಟಾ ಕುಮಾರ್ ಎಂದೆ ಪ್ರಸಿದ್ಧಿ ಪಡೆದಿರುವ ನಿತೀಶ್ ಕುಮಾರ್ ಯಾವ ಸಂದರ್ಭದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ಊಹೆಗೂ ನಿಲುಕದ ಪ್ರಶ್ನೆಯಾಗಿದೆ.

ಹೀಗಾಗಿ ಮುಖ್ಯಮಂತ್ರಿ ಸ್ಥಾನ ಅವರಿಗೆ ನೀಡಿದರೆ ಕೇಂದ್ರದಲ್ಲಿ ತಮ್ಮ ಸರ್ಕಾರ ಸುಭದ್ರವಾಗಿರುತ್ತದೆ ಜೊತೆಗೆ ಕೊಟ್ಟ ಮಾತಿನಂತೆ ಬಿಜೆಪಿ ನಡೆದುಕೊಂಡಿದೆ ಎಂಬ ಸಂದೇಶವನ್ನು ರಾಷ್ಟ್ರಮಟ್ಟದಲ್ಲಿ ಸಾರಲು ಕಮಲ ಪಡೆ ಮುಂದಾಗಿದೆ.

ಇದನ್ನು ಓದಿ: ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡ್ತಾರೆ: ಆರ್‌.ಅಶೋಕ

ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾರಿ ಸಾರಿ ಹೇಳಿದ್ದರು.

ಹಲವರು ಬಾರಿ ಮಾಧ್ಯಮದವರು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸಿದಾಗ ಆ ಸ್ಥಾನವೇ ಖಾಲಿ ಇಲ್ಲವೇ ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ಏನ್‌ಡಿಎ ನಮ್ಮ ಸಾರಥಿ ಎಂಬುದನ್ನು ಬಿಂಬಿಸಿದ್ದರು. ಇದರ ಪರಿಣಾಮವೇ ಈ ಬಾರಿಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಹಿಂದಿನ ಚುನಾವಣೆಗಿಂತಲೂ ಅಬ್ಬರದ ಪ್ರಚಾರ ನಡೆಸಿದರು. ಅಲ್ಲದೆ ಮೈತ್ರಿಕೂಟಗಳಾದ ಎಲ್‌ಜೆಪಿ ಹೆಚ್‌ಎಎಂ ಸೇರಿದಂತೆ ಸಣ್ಣಪುಟ್ಟ ಪಕ್ಷಗಳ ಅಭ್ಯರ್ಥಿಯ ಗೆಲುವಿಗೂ ಶ್ರಮಿಸಿದ್ದರು. ಪ್ರಚಂಡ ಬಹುಮತ ಪಡೆದಿರುವ ಎನ್‌ಡಿಎ ಒಂದೆರಡು ದಿನಗಳಲ್ಲಿ ಶಾಸಕಾಂಗ ಸಭೆ ನಡೆಸಿ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ.

೨೦೨೦ ರ ಚುನಾವಣೆಯಲ್ಲಿ, ಎನ್‌ಡಿಎ ವಿಧಾನಸಭೆಯಲ್ಲಿ ಬಹುಮತ ಗಳಿಸಿತು. ೧೨೫ ಸ್ಥಾನಗಳನ್ನು ಗೆದ್ದಿತು, ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಆಗಸ್ಟ್ ೨೦೨೨ ರಲ್ಲಿ, ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಜೊತೆ ಸರ್ಕಾರ ರಚಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

36 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

1 hour ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

2 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago