ದೇಶ- ವಿದೇಶ

ನಿತೀಶ್ ಮತ್ತೆ ಬಿಹಾರ್ ಸಿಎಂ?

ಪಾಟ್ನಾ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ, ಮಾಡಲು ಎನ್‌ಡಿಎ ತೀರ್ಮಾನಿಸಿದೆ.

ದಿಲ್ಲಿ ರಾಜಕಾರಣ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಮೈತ್ರಿ ಪಕ್ಷಗಳನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಸ್ಥಾನಗಳಲ್ಲಿ ದೊಡ್ಡಣ್ಣನಾಗಿದ್ದರೂ ತಮ್ಮನಂತಿರುವ ಸಂ.ದಳಕ್ಕೆ ಸಿಎಂ ಸ್ಥಾನ ಬಿಟ್ಟುಕೊಡಲು ಸಮ್ಮತಿಸಿದೆ. ಬಿಹಾರದಲ್ಲಿ ಉಲ್ಟಾ ಕುಮಾರ್ ಎಂದೆ ಪ್ರಸಿದ್ಧಿ ಪಡೆದಿರುವ ನಿತೀಶ್ ಕುಮಾರ್ ಯಾವ ಸಂದರ್ಭದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ಊಹೆಗೂ ನಿಲುಕದ ಪ್ರಶ್ನೆಯಾಗಿದೆ.

ಹೀಗಾಗಿ ಮುಖ್ಯಮಂತ್ರಿ ಸ್ಥಾನ ಅವರಿಗೆ ನೀಡಿದರೆ ಕೇಂದ್ರದಲ್ಲಿ ತಮ್ಮ ಸರ್ಕಾರ ಸುಭದ್ರವಾಗಿರುತ್ತದೆ ಜೊತೆಗೆ ಕೊಟ್ಟ ಮಾತಿನಂತೆ ಬಿಜೆಪಿ ನಡೆದುಕೊಂಡಿದೆ ಎಂಬ ಸಂದೇಶವನ್ನು ರಾಷ್ಟ್ರಮಟ್ಟದಲ್ಲಿ ಸಾರಲು ಕಮಲ ಪಡೆ ಮುಂದಾಗಿದೆ.

ಇದನ್ನು ಓದಿ: ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡ್ತಾರೆ: ಆರ್‌.ಅಶೋಕ

ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾರಿ ಸಾರಿ ಹೇಳಿದ್ದರು.

ಹಲವರು ಬಾರಿ ಮಾಧ್ಯಮದವರು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸಿದಾಗ ಆ ಸ್ಥಾನವೇ ಖಾಲಿ ಇಲ್ಲವೇ ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ಏನ್‌ಡಿಎ ನಮ್ಮ ಸಾರಥಿ ಎಂಬುದನ್ನು ಬಿಂಬಿಸಿದ್ದರು. ಇದರ ಪರಿಣಾಮವೇ ಈ ಬಾರಿಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಹಿಂದಿನ ಚುನಾವಣೆಗಿಂತಲೂ ಅಬ್ಬರದ ಪ್ರಚಾರ ನಡೆಸಿದರು. ಅಲ್ಲದೆ ಮೈತ್ರಿಕೂಟಗಳಾದ ಎಲ್‌ಜೆಪಿ ಹೆಚ್‌ಎಎಂ ಸೇರಿದಂತೆ ಸಣ್ಣಪುಟ್ಟ ಪಕ್ಷಗಳ ಅಭ್ಯರ್ಥಿಯ ಗೆಲುವಿಗೂ ಶ್ರಮಿಸಿದ್ದರು. ಪ್ರಚಂಡ ಬಹುಮತ ಪಡೆದಿರುವ ಎನ್‌ಡಿಎ ಒಂದೆರಡು ದಿನಗಳಲ್ಲಿ ಶಾಸಕಾಂಗ ಸಭೆ ನಡೆಸಿ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ.

೨೦೨೦ ರ ಚುನಾವಣೆಯಲ್ಲಿ, ಎನ್‌ಡಿಎ ವಿಧಾನಸಭೆಯಲ್ಲಿ ಬಹುಮತ ಗಳಿಸಿತು. ೧೨೫ ಸ್ಥಾನಗಳನ್ನು ಗೆದ್ದಿತು, ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಆಗಸ್ಟ್ ೨೦೨೨ ರಲ್ಲಿ, ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಜೊತೆ ಸರ್ಕಾರ ರಚಿಸಿದ್ದರು.

ಆಂದೋಲನ ಡೆಸ್ಕ್

Recent Posts

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

9 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

24 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

44 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago