ಕೋಲ್ಕತ್ತಾ: ಅವಕಾಶ ದೊರೆತರೆ ಮೈತ್ರಿಕೂಟದ ನಾಯಕತ್ವವನ್ನು ನಾನೇ ವಹಿಸಿಕೊಳ್ಳಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟದ ಕೆಲಸ ಮಾಡುತ್ತಿರುವ ಬಗೆಯ ಕುರಿತು ಭಾರೀ ಅಸಮಾಧಾನ ವ್ಯಕ್ತಪಡಿಸಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಹೊಣೆಯ ಜೊತೆಗೆ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸುವ ಹೊಣೆಯನ್ನು ನಾನು ಏಕಕಾಲದಲ್ಲಿ ನಿರ್ವಹಿಸಲು ಸಾಧ್ಯವಿದೆ ಎಂದರು.
ಇಂಡಿಯಾ ಮೈತ್ರಿಕೂಟವನ್ನು ನಾನು ರೂಪಿಸಿದ್ದೆ. ಈಗ ಅದನ್ನು ನಿರ್ವಹಿಸುವ ಹೊಣೆಯು ಮೈತ್ರಿಕೂಟವನ್ನು ಮುನ್ನಡೆಸುತ್ತಿರುವವರ ಮೇಲಿದೆ. ಅವರಿಗೆ ನಿರ್ವಹಣೆ ಸಾಧ್ಯವಿಲ್ಲ ಎಂದರೆ ನಾನೇನು ಮಾಡಲಿ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕು ಎಂದು ನಾನು ಹೇಳುತ್ತೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನಗೆ ಪಶ್ಚಿಮ ಬಂಗಾಳದಿಂದ ಹೊರಗಡೆ ಹೋಗಲು ಇಷ್ಟವಿಲ್ಲ. ಆದರೆ ನಾನು ಇಲ್ಲಿಂದಲೇ ಮೈತ್ರಿಕೂಟವನ್ನು ನಡೆಸಬಲ್ಲೆ ಎಂದು ಹೇಳಿದರು.
ಬಿಜೆಪಿಯನ್ನು ವಿರೋಧಿಸುವ ರಾಜಕೀಯ ಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ 24ಕ್ಕೂ ಹೆಚ್ಚು ಪಕ್ಷಗಳು ಇವೆ. ಆದರೆ ಪಕ್ಷಗಳ ನಡುವೆ ಸಮನ್ವಯ ಇಲ್ಲ ಎಂಬ ಟೀಕೆಯು ಈ ಮೈತ್ರಿಕೂಟದ ಕುರಿತಾಗಿ ಇದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…