ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಹಲವು ವಿಚಾರಗಳ ಕುರಿತು ಕೋಲಾಹಲ ಎಬ್ಬಿಸಲು ಸಾಧ್ಯತೆಯಿದೆ.
ಮಣಿಪುರ ವಿದ್ಯಮಾನ, ಅದಾನಿ ಸಮೂಹದ ವಿರುದ್ಧದ ಆರೋಪಗಳು ಹಾಗೂ ವಾಯುಮಾಲಿನ್ಯ ಕುರಿತು ಚರ್ಚೆ ನಡೆಯಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ.
ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಕಾವೇರಿದ ಚರ್ಚೆಗಳಿಗೆ ಸಾಕ್ಷಿಯಾಗುವ ಎಲ್ಲಾ ಲಕ್ಷಣಗಳು ಕಾಣಸಿಗುತ್ತಿವೆ.
ಇನ್ನು ಸಿಪಿಐ ಪ್ರಕಟಣೆ ಹೊರಡಿಸಿದ್ದು, ಕೇರಳ ಕುರಿತು ಕೇಂದ್ರ ಸರ್ಕಾರ ತೋರುತ್ತಿರುವ ತಾರತಮ್ಯ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದೆ.
ಒಟ್ಟಿನಲ್ಲಿ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ಕೋಲಾಹಲ ನಡೆಯುವ ಸಾಧ್ಯತೆಯಿದ್ದು, ಎಲ್ಲವನ್ನು ಎದುರಿಸಲು ಆಡಳಿತ ಪಕ್ಷ ಸಕಲ ರೀತಿಯಲ್ಲೂ ತಯಾರಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…