ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಹಲವು ವಿಚಾರಗಳ ಕುರಿತು ಕೋಲಾಹಲ ಎಬ್ಬಿಸಲು ಸಾಧ್ಯತೆಯಿದೆ.
ಮಣಿಪುರ ವಿದ್ಯಮಾನ, ಅದಾನಿ ಸಮೂಹದ ವಿರುದ್ಧದ ಆರೋಪಗಳು ಹಾಗೂ ವಾಯುಮಾಲಿನ್ಯ ಕುರಿತು ಚರ್ಚೆ ನಡೆಯಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ.
ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಕಾವೇರಿದ ಚರ್ಚೆಗಳಿಗೆ ಸಾಕ್ಷಿಯಾಗುವ ಎಲ್ಲಾ ಲಕ್ಷಣಗಳು ಕಾಣಸಿಗುತ್ತಿವೆ.
ಇನ್ನು ಸಿಪಿಐ ಪ್ರಕಟಣೆ ಹೊರಡಿಸಿದ್ದು, ಕೇರಳ ಕುರಿತು ಕೇಂದ್ರ ಸರ್ಕಾರ ತೋರುತ್ತಿರುವ ತಾರತಮ್ಯ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದೆ.
ಒಟ್ಟಿನಲ್ಲಿ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ಕೋಲಾಹಲ ನಡೆಯುವ ಸಾಧ್ಯತೆಯಿದ್ದು, ಎಲ್ಲವನ್ನು ಎದುರಿಸಲು ಆಡಳಿತ ಪಕ್ಷ ಸಕಲ ರೀತಿಯಲ್ಲೂ ತಯಾರಾಗಿದೆ ಎನ್ನಲಾಗುತ್ತಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…