ದೇಶ- ವಿದೇಶ

ಶಬರಿ ಮಲೆಯಲ್ಲಿ ಮಹಿಳೆ ಸಾವು ; ನೂಕು ನುಗ್ಗಲಿನಲ್ಲಿ ಉಸಿರುಕಟ್ಟಿ ಕೊನೆಯುಸಿರು

ತಿರುವನಂತಪುರಂ : ಕೇರಳದ ಶಬರಿಮಲೆಯಲ್ಲಿ ಸುಮಾರು ೨ ಲಕ್ಷಕ್ಕೂ ಅಽಕ ಮಂದಿ ಜಮಾಯಿಸಿದ್ದು, ನೂಕು-ನುಗ್ಗಲುನಲ್ಲಿ ಉಸಿರು ಗಟ್ಟಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದಾಗಿ ಒತ್ತಡ ಹೆಚ್ಚಾಗಿದ್ದು, ನಿಲ್ಲಲು ಜಾಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಂಪಾದಿಂದ ದೇಗುಲದವರೆಗೂ ಸುಮಾರು ೭೦ ಸಾವಿರ ಜನ ನಿಲ್ಲಲು ಅವಕಾಶವಿದ್ದು, ೨ ಲಕ್ಷಕ್ಕೂ ಅಽಕ ಮಂದಿ ಜಮಾಯಿಸಿದ್ದಾರೆ.

ಭಕ್ತರಿಗೆ ಶೌಚಾಲಯ, ನೀರಿನ ವ್ಯವಸ್ಥೆ ಸಾಲದೆ ಪರದಾಡುವಂತಾಗಿದೆ, ದರ್ಶನಕ್ಕೆ ಸುಮಾರು ೧೪ ಗಂಟೆಗಳಿಗೂ ಹೆಚ್ಚಿನ ಸಮಯ ಹಿಡಿಯುತ್ತಿದ್ದು, ಊಟ, ನೀರು, ಶೌಚಾಲಯದಂತಹ ಮೂಲ ಸೌಲಭ್ಯಗಳಿಗೆ ಪರದಾಡುತ್ತಿದ್ದಾರೆ. ಭಕ್ತರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ಅವಕಾಶ ಸಿಕ್ಕರೆ ಮಾತ್ರ ಶಬರಿಮಲೆಗೆ ಬರುವಂತೆ ಅಲ್ಲಿನ ಆಡಳಿತ ಮಂಡಳಿ ಮನವಿ ಮಾಡಿದೆ ಎಂದರು.

ಇದನ್ನೂ ಓದಿ :-ಮೈಸೂರು ವಿ.ವಿ | ಹೆಚ್ಚುವರಿ ವಿದ್ಯಾರ್ಥಿಗಳ ತೆರವಿಗೆ ಗಡುವು ನೀಡಿದ ಕುಲಸಚಿವೆ

ಭಕ್ತರಿಗೆ ನೀರಿನ ಸೌಲಭ್ಯ ಕಲ್ಪಿಸಲು ಕಷ್ಟವಾಗುತ್ತಿದೆ. ಯಾತ್ರೆಯನ್ನು ಮಾಲಾಧಾರಿಗಳು ಮುಂದೂಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ. ಎರುಮೇಲಿ, ಪಂಪಾ, ರಾಣಿಪಂಪಾ, ಪ್ಲಾಪಳ್ಳಿ, ನೀಲಕ್ಕಲ್ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಹಿಂದೆ-ಮುಂದೆ ಸಂಚರಿಸಲಾಗದೆ ಸಿಲುಕಿ ಪರದಾಡುತ್ತಿದ್ದಾರೆ. ಹಿಂದೆಂದೂ ಇಲ್ಲದಷ್ಟು ಜನರ ದಂಡು ಹರಿದು ಬರುತ್ತಿದೆ. ಪ್ರತಿ ದಿನ ಒಂದು ಲಕ್ಷದಷ್ಟು ಆನ್‌ಲೈನ್ ಬುಕ್ಕಿಂಗ್ ಮತ್ತು ೨೦ ಸಾವಿರ ಸ್ಪಾಟ್ ಬುಕ್ಕಿಂಗ್‌ಗೆ ಸೀಮಿತಗೊಳಿಸಿಲಾಗಿತ್ತು. ಆದರೆ ಅದನ್ನು ಮೀರಿ ಜನ ಟಿಕೆಟ್ ಪಡೆದು ದರ್ಶನಕ್ಕೆ ಮುಂದಾಗಿದ್ದಾರೆ.

ಮೆದುಳು ತಿನ್ನುವ ಮಾರಣಾಂತಿಕ ನೆಗ್ಲೇರಿಯಾ ಪೌಲೇರಿ ಅಮೀಬಾ ಸೋಂಕಿನ ನಡುವೆಯೂ ಯಾತ್ರಿಕರ ಭೇಟಿ ತಗ್ಗಿಲ್ಲ. ಜನವರಿಯಲ್ಲಿ ಮಕರ ಸಂಕ್ರಾಂತಿ ವೇಳೆ ಮಂಡಲ ಪೂಜೆಗಾಗಿ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಅದಕ್ಕಾಗಿ ನವೆಂಬರ್, ಡಿಸೆಂಬರ್‌ನಲ್ಲೇ ಯಾತ್ರೆ ಪೂರ್ಣಗೊಳಿಸಿಕೊಳ್ಳುವ ಉದ್ದೇಶದಿಂದ ಬಹಳಷ್ಟು ಮಂದಿ ತೆರಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 mins ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

26 mins ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

1 hour ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

2 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

3 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

4 hours ago