ದೇಶ- ವಿದೇಶ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ ಬಹುಮತದಿಂದ ಸೋಲು ಕಂಡಿದೆ.

ಇಂದು ಲೋಕಸಭೆಯಲ್ಲಿ ಮಸೂದೆಯ ಮೇಲೆ ಚರ್ಚೆ ನಡೆದ ನಂತರ ನಡೆದ ಮತದಾನದಲ್ಲಿ ಸರ್ಕಾರಕ್ಕೆ ಬಹುಮತ ಸಿಗಲಿಲ್ಲ. ವಿರೋಧ ಪಕ್ಷಗಳು ಮತ್ತು ಕೆಲವು ಸಖ್ಯ ಪಕ್ಷಗಳು ಮಸೂದೆಯ ವಿರುದ್ಧ ಮತ ಚಲಾಯಿಸಿದ್ದರಿಂದ ಅದು ಸೋಲು ಕಂಡಿದೆ.

ಈ ಮಸೂದೆಯು ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಒದಗಿಸುವ ಗುರಿ ಹೊಂದಿತ್ತು. ಇದಕ್ಕಾಗಿ ಸಂವಿಧಾನ ತಿದ್ದುಪಡಿ ಅಗತ್ಯವಿತ್ತು. ಆದರೆ ಲೋಕಸಭೆಯಲ್ಲಿ ಅನುಮೋದನೆ ಪಡೆಯಲು ವಿಫಲವಾಗಿದೆ.

ಮೂರನೇ ಎರಡರಷ್ಟು ಬಹುಪತ ಸಿಗದೆ ಮಸೂದೆಗೆ ಸೋಲಾಗಿದೆ. 489 ಸಂಸದರು ಮತದಾನದಲ್ಲಿ ಭಾಗವಹಿಸಿದ್ದರು. ಹಾಗಾಗಿ ಮಸೂದೆ ಅಂಗೀಕರಿಸಲು ಸರ್ಕಾರಕ್ಕೆ 328 ಮತಗಳ ಅವಶ್ಯಕತೆ ಇತ್ತು. ಮಸೂದೆ ಮರ 298ಮತಗಳ ಬಿದ್ದಿದ್ದು, ವಿರುದ್ದ 230 ಮತಗಳು ಬಿದ್ದಿವೆ. ಸಂವಿಧಾನ ತಿದ್ದುಪಡಿ ಮಸೂದೆಯಾಗಿರುವುದರಿಂದ ಮೂರನೇ ಎರಡರಷ್ಟು ಬಹುಮತ ಅತ್ಯಗತ್ಯವಾಗಿತ್ತು.

ಮಹಿಳಾ ಮೀಸಲಾತಿ ಮಸೂದೆಯು ದಶಕಗಳಿಂದಲೂ ಚರ್ಚೆಯಲ್ಲಿದ್ದು, ಹಿಂದಿನ ಸರ್ಕಾರಗಳ ಕಾಲದಲ್ಲೂ ಇದು ಸಂಸತ್ತು ತಲುಪಿದ್ದರೂ ಅಂತಿಮ ಅನುಮೋದನೆ ಪಡೆಯಲು ವಿಫಲವಾಗಿತ್ತು.

 

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

13 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

15 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

18 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

22 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 day ago