ದೇಶ- ವಿದೇಶ

ವಿಶ್ವದ ಅತ್ಯಂತ ಹಿರಿಯ ಮಹಿಳೆ ಲುಸಿಲ್ ರಾಂಡನ್ ನಿಧನ

ಪ್ಯಾರಿಸ್: ವಿಶ್ವದ ಅತ್ಯಂತ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಅವರು ತಮ್ಮ 118ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸೇಂಟ್ ಕ್ಯಾಥರೀನ್ ಲೇಬರ್ ನರ್ಸಿಂಗ್ ಹೋಮ್‌ನ ವಕ್ತಾರ ಡೇವಿಡ್ ತವೆಲ್ಲಾ ಎಎಫ್‌ಪಿಗೆ ತಿಳಿಸಿದ್ದಾರೆ.

ಸಿಸ್ಟರ್ ಆ್ಯಂಡ್ರೆ ಎಂದು ಕರೆಯಲ್ಪಡುತ್ತಿದ್ದ ರಾಂಡನ್ ಅವರು, ಫೆಬ್ರವರಿ 11, 1904ರಂದು ದಕ್ಷಿಣ ಫ್ರಾನ್ಸ್‌ನಲ್ಲಿ ಮೊದಲ ಮಹಾಯುದ್ಧ ಆರಂಭಕ್ಕೂ ಒಂದು ದಶಕಕ್ಕೂ ಮುನ್ನ ಜನಿಸಿದ್ದರು.

ಟೌಲೋನ್‌ನಲ್ಲಿರುವ ತಮ್ಮ ನರ್ಸಿಂಗ್ ಹೋಮ್‌ನಲ್ಲಿ ನಿದ್ರೆಯಲ್ಲಿದ್ದಾಗಲೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವಕ್ತಾರ ಡೇವಿಡ್ ತಿಳಿಸಿದ್ದಾರೆ.

‘ಅವರ ಸಾವಿನ ಬಗ್ಗೆ ಬಹಳ ದುಃಖವಿದೆ. ಆದರೆ, ತಮ್ಮ ಪ್ರೀತಿಯ ಸಹೋದರನನ್ನು ಸೇರುವುದು ಅವರ ಬಯಕೆಯಾಗಿತ್ತು. ಅವರಿಗೆ ಈ ಸಾವು ಒಂದು ವಿಮೋಚನೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ 119ವರ್ಷ ವಯಸ್ಸಿನ ಜಪಾನ್‌ನ ಕೇನ್ ತನಕಾ ಅವರ ಮರಣಕ್ಕೂ ಮೊದಲು ಲುಸಿಲ್ ರಾಂಡನ್ ಅತ್ಯಂತ ಹಿರಿಯ ಯುರೋಪಿಯನ್ ಎಂದು ಕರೆಯಲ್ಪಡುತ್ತಿದ್ದರು. ಕೇನ್ ನಿಧನದ ಬಳಿಕ ಭೂಮಿಯ ಮೇಲೆ ಬದುಕಿರುವ ಅತ್ಯಂತ ಹಿರಿಯ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾದರು. ಏಪ್ರಿಲ್ 2022ರಲ್ಲಿ ಗಿನ್ನೆಸ್ ದಾಖಲೆಗೆ ಅವರ ಹೆಸರು ಸೇರ್ಪಡೆಯಾಗಿತ್ತು.

 

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

12 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

12 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

12 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

12 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

13 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

13 hours ago