ಗಾಂಧಿನಗರ: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಜುನಾಗಢದ ಗಿರ್ ವನ್ಯಜೀವಿ ಅರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಶ್ವ ವನ್ಯಜೀವಿ ದಿನದ ಸಲುವಾಗಿ ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಕೆಲಸ ಆಗಬೇಕಿದೆ ಎಂದು ಬರೆದುಕೊಂಡಿದ್ದಾರೆ.
ಪ್ರತಿಯೊಂದು ಪ್ರಭೇದವೂ ಕಾಡಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮುಂದಿನ ಪೀಳಿಗೆಗೆ ಅವುಗಳನ್ನು ನಾವೆಲ್ಲರೂ ಸೇರಿ ರಕ್ಷಿಸೋಣ. ವನ್ಯಜೀವಿಗಳನ್ನು ಸಂರಕ್ಷಿಸುವ ಸಲುವಾಗಿ ಭಾರತ ಕೈಗೊಂಡ ಕೊಡುಗೆಗಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಸಫಾರಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲ ಸಚಿವರು ಹಾಗೂ ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದರು. ಈ ವೇಳೆ ಪ್ರಧಾನಿ ಮೋದಿ ಸಿಂಹಗಳ ಚಿತ್ರಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…