ಗಾಂಧಿನಗರ: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಜುನಾಗಢದ ಗಿರ್ ವನ್ಯಜೀವಿ ಅರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಶ್ವ ವನ್ಯಜೀವಿ ದಿನದ ಸಲುವಾಗಿ ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಕೆಲಸ ಆಗಬೇಕಿದೆ ಎಂದು ಬರೆದುಕೊಂಡಿದ್ದಾರೆ.
ಪ್ರತಿಯೊಂದು ಪ್ರಭೇದವೂ ಕಾಡಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮುಂದಿನ ಪೀಳಿಗೆಗೆ ಅವುಗಳನ್ನು ನಾವೆಲ್ಲರೂ ಸೇರಿ ರಕ್ಷಿಸೋಣ. ವನ್ಯಜೀವಿಗಳನ್ನು ಸಂರಕ್ಷಿಸುವ ಸಲುವಾಗಿ ಭಾರತ ಕೈಗೊಂಡ ಕೊಡುಗೆಗಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಸಫಾರಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲ ಸಚಿವರು ಹಾಗೂ ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದರು. ಈ ವೇಳೆ ಪ್ರಧಾನಿ ಮೋದಿ ಸಿಂಹಗಳ ಚಿತ್ರಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…