ದೇಶ- ವಿದೇಶ

ಜಗತ್ತಿನ ಹಿರಿಯ ಡಿಸ್ಕೋ ಜಾಕಿ ಅಂಕಲ್ ರೇ ಇನ್ನಿಲ್ಲ

ಹಾಂಗ್‌ಕಾಂಗ್: ಜಗತ್ತಿನ ಅತೀ ಹಿರಿಯ ಡಿಜೆ (ಡಿಸ್ಕೋ ಜಾಕಿ) ಎಂದು ಖ್ಯಾತಿಯಾಗಿದ್ದ ಹಾಂಗ್‌ಕಾಂಗ್‌ನ ಮರಿಯಾ ಕೊರಡಿರೋ ಅವರು ತಮ್ಮ 98ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅಭಿಮಾನಿಗಳಿಂದ ‘ಅಂಕಲ್ ರೇ’ ಎಂದು ಜನಪ್ರಿಯರಾಗಿದ್ದ ಮರಿಯಾ ಕೊರಡಿರೋ ಜಗತ್ತಿನಲ್ಲಿ ಅತೀ ಹೆಚ್ಚು ಹಿರಿಯ ಹಾಗೂ ದೀರ್ಘಕಾಲದ ಡಿಸ್ಕೋ ಜಾಕಿ ಎಂದು ಗಿನ್ನಿಸ್ ದಾಖಲೆ ಸೇರಿದ್ದರು.

2021ರಲ್ಲಿ ತಮ್ಮ 96 ನೇ ವಯಸ್ಸಿನಲ್ಲಿ ಡಿಸ್ಕೋ ಜಾಕಿ ಕೆಲಸಕ್ಕೆ ನಿವೃತ್ತಿ ತೆಗೆದುಕೊಂಡಿದ್ದ ಅವರು ಇತ್ತೀಚೆಗೆ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕುಟುಂಬದವರ ಸಮ್ಮುಖದಲ್ಲೇ ಸಂಗೀತದ ಬೀಳ್ಕೊಡುಗೆಯೊಂದಿಗೆ ಅಂಕಲ್ ರೇ ನಿಧನರಾದರು.

ಪೋರ್ಚುಗಲ್‌ನಿಂದ ಬಂದಿದ್ದ ವಲಸೆ ಕುಟುಂಬದಲ್ಲಿ ಅಂಕಲ್ ರೇ 1924 ರಲ್ಲಿ ಹಾಂಗ್‌ಕಾಂಗ್‌ನಲ್ಲಿ ಜನಿಸಿದ್ದರು. ವೃತ್ತಿಯ ಆರಂಭದಲ್ಲಿ ಕೆಲ ವರ್ಷ ಜೈಲು ವಾರ್ಡನ್ ಹಾಗೂ ಬ್ಯಾಂಕ್‌ ಕ್ಲರ್ಕ್ ಆಗಿ ಕೆಲಸ ಮಾಡಿದರು. ಸಂಗೀತದ ಮೇಲೆ ವಿಪರೀತ ಮೋಹ ಹೊಂದಿದ್ದ ಅವರು 1949ರಲ್ಲಿ ಹಾಂಗ್‌ಕಾಂಗ್ ರೇಡಿಯೊ ಸ್ಟೇಷನ್ (RTHK) ಸೇರಿದ್ದರು. ಅಲ್ಲಿಂದ 7 ದಶಕ ಹಾಂಗ್‌ಕಾಂಗ್ ಜನತೆಗೆ ಸಂಗೀತದ ರಸದೌತಣವನ್ನು ಉಣಬಡಿಸಿದ್ದರು.

‘ತಮ್ಮ ಪ್ರೊಗ್ರೆಸಿವ್ ಜಾಜ್’, ‘ಆಲ್ ದಿ ವೇ ವಿತ್ ರೇ’ ಎಂಬ ಕಾರ್ಯಕ್ರಮಗಳ ಮೂಲಕ ಅಂಕಲ್ ರೇ ಅವರು ಹಾಂಗ್‌ಕಾಂಗ್‌ನಲ್ಲಿ ಮನೆಮಾತಾಗಿದ್ದರು. ಯುವಕ ಯುವತಿಯರು ಇವರ ಡಿಜೆ ಕಾರ್ಯಕ್ರಮಗಳನ್ನು ಮುಗಿಬಿದ್ದು ಆನಂದಿಸುತ್ತಿದ್ದರು. ಆಲ್ ದಿ ವೇ ವಿತ್ ರೇ ಕಾರ್ಯಕ್ರಮ 51 ವರ್ಷ 3 ತಿಂಗಳು ಪ್ರಸಾರವಾಗಿತ್ತು

andolanait

Recent Posts

ಮಕ್ಕಳ ಜೊತೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ…

12 mins ago

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

42 mins ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

58 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

1 hour ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

3 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

3 hours ago