ದೇಶ- ವಿದೇಶ

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಿದೆ.

2026ರ ಮಾರ್ಚ್.‌15ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರಿತೇಶ್‌ ಕುಮಾರ್‌ ಸಿಂಗ್‌ ಎಂಬ ಪ್ರಯಾಣಿಕರಿಗೆ ರಾತ್ರಿಯ ಊಟದ ಸಮಯದಲ್ಲಿ ಮೊಸರು ಮತ್ತು ದಾಲ್‌ ನೀಡಲಾಗಿತ್ತು. ಆ ಮೊಸರಿನ ಕಪ್‌ ತೆರೆದಾಗ ಅದರಲ್ಲಿ ಜೀವಂತ ಹುಳುಗಳು ಹರಿದಾಡುತ್ತಿರುವುದು ಕಂಡು ಬಂದಿದೆ.

ತಕ್ಷಣವೇ ಅವರು ಈ ಬಗ್ಗೆ ರೈಲಿನಲ್ಲಿದ್ದ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಪ್ರಯಾಣಿಕರು ಹುಳುಗಳನ್ನು ತೋರಿಸಿದಾಗ ಅಲ್ಲಿನ ಸಿಬ್ಬಂದಿ ಅದನ್ನು ಒಪ್ಪಿಕೊಳ್ಳದೇ ಅದು ಹುಳುಗಳಲ್ಲ. ಕೇಸರಿ ಎಂದು ನಂಬಿಸಲು ಪ್ರಯತ್ನಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು, ಹುಳುಗಳು ಜೀವಂತವಾಗಿ ಚಲಿಸುತ್ತಿರುವುದುನ್ನು ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಪಾಸಣೆಯ ವೇಳೆ ಆ ಮೊಸರು ಈಗಾಗಲೇ ಅವಧಿ ಮೀರಿರುವುದು ಕೂಡ ಪತ್ತೆಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ರೈಲ್ವೆ ಸಚಿವಾಲಯ ಎಚ್ಚೆತ್ತುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಣೆ ಮಾಡಿದೆ.

ಆಹಾರದ ಮೇಲ್ವಿಚಾರಣೆಯಲ್ಲಿ ವೈಫಲ್ಯ ಕಂಡಿದ್ದಕ್ಕಾಗಿ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

2 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

2 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

2 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago