ಹೊಸದಿಲ್ಲಿ: ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ ವಾಸದೇವನ್ ನಾಯರ್ (91) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.
ಇವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇರಳ ಸಿಎಂ ಪಿಣರಾಯ್ ವಿಜಯನ್ ಸೇರಿದಂತೆ ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಲಯಾಳಂನ ಹೆಸರಾಂತ ಲೇಖಕರಾದ ಎಂ.ಟಿ ವಾಸುದೇವನ್ ನಾಯರ್ ಅವರ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ. ಅವರ ಬರಹಗಳಲ್ಲಿ ಗ್ರಾಮೀಣ ಭಾರತ ಜೀವಂತವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಎಂ.ಟಿ ವಾಸುದೇವನ್ ನಾಯರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಮಲಯಾಳಂ ಸಾಹಿತ್ಯ ಮತ್ತು ಚಿತ್ರರಂಗದ ಗೌರವಾನ್ವಿತ ವ್ಯಕ್ತಿ ಇವರು. ಅನೇಕರಿಗೆ ಸ್ಫೂರ್ತಿ ನೀಡುವ ಇವರು ಅನ್ವೇಷಣೆಗಳ ಮೂಲಕ ಹಿಂದಿನ ಪೀಳಿಗೆಯನ್ನು ರೂಪಿಸಿದ್ದಾರೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಸಾಮಾಜಿಕ್ ಜಾಲತಾಣ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಎಂ.ಟಿ ವಾಸುದೇವನ್ ನಾಯರ್ ಅವರು ತಮ್ಮ ಕೃತಿಗಳ ಮೂಲಕ ಕೇರಳದ ಬದುಕಿನ ಸೌಂದರ್ಯ ಮತ್ತು ಸಂಕೀರ್ಣತೆಗಳನ್ನು ಸಮರ್ಥವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪೊಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…