ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ ಎಂದು ಕಿಡಿಕಾರಿದ್ದಾರೆ.
ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಈ ಹಿಂದೆ ಅರವಿಂದ್ ಕೇಜ್ರಿವಾಲ್ ಹೇಳಿದ್ದ ಮಾತನ್ನು ನೆನಪಿಸಿಕೊಂಡ ರಾಹುಲ್ ಗಾಂಧಿ ಅವರು, ನೀವು ಈಗಲೇ ಯಮುನಾ ನದಿಯಲ್ಲಿ ಮುಳುಗೇಳಿರಿ ಎಂದು ಸವಾಲು ಹಾಕಿದರು.
ಯಮುನಾ ನದಿ ಈಗಲೂ ಮಲಿನವಾಗಿದೆ. ಆ ನೀರನ್ನು ನೀವು ಒಮ್ಮೆ ಕುಡಿಯಿರಿ. ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದರು.
ಇನ್ನು ಈ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಿಎಂ ಆಗಿದ್ದ ವೇಳೆ ಹೊಸ ರಾಜಕೀಯ ವ್ಯವಸ್ಥೆಯನ್ನು ತಂದು, ಭ್ರಷ್ಟಾಚಾರವನ್ನು ಅಂತ್ಯಗೊಳಿಸುತ್ತೇನೆ ಎಂದು ಹೇಳಿದ್ದರು. ಐದು ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸಿ ಅದರಲ್ಲಿ ಮುಳುಗೇಳುತ್ತೇನೆ ಎಂದು ಅವರು ಭರವಸೆ ನೀಡಿದ್ದರು.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…