ದೇಶ- ವಿದೇಶ

ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದೃಷ್ಟಕರ: ಶಾಸಕ ಯತ್ನಾಳ್‌

ನವದೆಹಲಿ: ರಾಜ್ಯ ಸರ್ಕಾರಕ್ಕೆ ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದಷ್ಟಕರ ಸಂಗತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, KTTP ಕಾಯ್ದೆಯನ್ನು ತಿದ್ದುಪಡಿ ಮಾಡಿ ಸಿವಿಲ್ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4 % ಮೀಸಲು ನೀಡುತ್ತಿರುವ ಕಾಂಗ್ರೆಸ್ ಪಕ್ಷದ ನಿರ್ಧಾರ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು. ಈಗಾಗಲೇ ಆಂಧ್ರ ಹಾಗೂ ಕೋಲ್ಕತ್ತಾ ಉಚ್ಚ ನ್ಯಾಯಾಲಯಗಳು ಧರ್ಮಾಧಾರಿತ ಮೀಸಲಾತಿಯನ್ನು ಕೊಡಬಾರದು ಎಂದು ಆದೇಶ ನೀಡಿದೆ. ಮೀಸಲಾತಿಯು ಧರ್ಮದ ಆಧಾರದ ಮೇಲಿರರಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ‘ಮೌಖಿಕ ಸೂಚನೆ’ ನೀಡಿತ್ತು ಎಂದು ಹೇಳಿದ್ದಾರೆ.

ಈ ಹಿಂದೆ 4 % ಮೀಸಲಾತಿ ಎಲ್ಲ ಅಲ್ಪ ಸಂಖ್ಯಾತ ಸಮುದಾಯಗಳಿಗೂ ಅನ್ವಯ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರ ಈಗ ಕೇವಲ ಮುಸಲ್ಮಾನರಿಗೆ ಮಾತ್ರ ಅನ್ವಯ ಎಂದು ಹೇಳಿರುವುದು ಇವರ ಕುಟಿಲ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿ ಸಾಮಾಜಿಕ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಿಗೆ ನೀಡಬೇಕೆ ಹೊರತು ಧರ್ಮಾಧಾರಿತವಾಗಿ ಕೊಡಬಾರದು ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲ ಎಂಬುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ವಿಚಾರವನ್ನು ಪ್ರಸ್ತಾಪಿಸುತ್ತಿದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿರುವುದರ ಬಗ್ಗೆ ಮಾತನಾಡಿದ ಅವರು, ಆ ಚೀಟಿ ಯಾರು ಕಳಿಸಿದ್ದೆಂದು ಗೊತ್ತಿಲ್ಲ. ಆದರೆ ಹಿರಿಯ ಸಚಿವ ರಾಜಣ್ಣನವರು ಬಹಿರಂಗವಾಗೇ ಹನಿಟ್ರ್ಯಾಪ್ ಪ್ರಯತ್ನ ತನ್ನ ಮೇಲೆ ನಡೆಯುತ್ತಿದೆ ಎಂದಿದ್ದಾರೆ.

ಇನ್ನು ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹನಿಟ್ರ್ಯಾಪ್‌ ಅನ್ನು ಯಾಕೆ ಮಾಡುತ್ತಿದ್ದಾರೆ, ಯಾಕೆ ಬ್ಲ್ಯಾಕ್ ಮೇಲ್ ಪ್ರಯತ್ನ ನಡೆದಿದೆ ಎಂದು ಕರ್ನಾಟಕದ ಜನತೆಗೆ ಗೊತ್ತಾಗಬೇಕು. ಆದರೆ ಅವರ ಮಾತಿನ ಧಾಟಿ ನೋಡಿದರೆ ಕಾಂಗ್ರೆಸ್‌ ಪಕ್ಷದ ಮಂತ್ರಿಯೊಬ್ಬ ಭಾಗಿಯಾಗಿರುವಂತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago