ದೇಶ- ವಿದೇಶ

ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದೃಷ್ಟಕರ: ಶಾಸಕ ಯತ್ನಾಳ್‌

ನವದೆಹಲಿ: ರಾಜ್ಯ ಸರ್ಕಾರಕ್ಕೆ ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದಷ್ಟಕರ ಸಂಗತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, KTTP ಕಾಯ್ದೆಯನ್ನು ತಿದ್ದುಪಡಿ ಮಾಡಿ ಸಿವಿಲ್ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4 % ಮೀಸಲು ನೀಡುತ್ತಿರುವ ಕಾಂಗ್ರೆಸ್ ಪಕ್ಷದ ನಿರ್ಧಾರ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು. ಈಗಾಗಲೇ ಆಂಧ್ರ ಹಾಗೂ ಕೋಲ್ಕತ್ತಾ ಉಚ್ಚ ನ್ಯಾಯಾಲಯಗಳು ಧರ್ಮಾಧಾರಿತ ಮೀಸಲಾತಿಯನ್ನು ಕೊಡಬಾರದು ಎಂದು ಆದೇಶ ನೀಡಿದೆ. ಮೀಸಲಾತಿಯು ಧರ್ಮದ ಆಧಾರದ ಮೇಲಿರರಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ‘ಮೌಖಿಕ ಸೂಚನೆ’ ನೀಡಿತ್ತು ಎಂದು ಹೇಳಿದ್ದಾರೆ.

ಈ ಹಿಂದೆ 4 % ಮೀಸಲಾತಿ ಎಲ್ಲ ಅಲ್ಪ ಸಂಖ್ಯಾತ ಸಮುದಾಯಗಳಿಗೂ ಅನ್ವಯ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರ ಈಗ ಕೇವಲ ಮುಸಲ್ಮಾನರಿಗೆ ಮಾತ್ರ ಅನ್ವಯ ಎಂದು ಹೇಳಿರುವುದು ಇವರ ಕುಟಿಲ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿ ಸಾಮಾಜಿಕ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಿಗೆ ನೀಡಬೇಕೆ ಹೊರತು ಧರ್ಮಾಧಾರಿತವಾಗಿ ಕೊಡಬಾರದು ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲ ಎಂಬುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ವಿಚಾರವನ್ನು ಪ್ರಸ್ತಾಪಿಸುತ್ತಿದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿರುವುದರ ಬಗ್ಗೆ ಮಾತನಾಡಿದ ಅವರು, ಆ ಚೀಟಿ ಯಾರು ಕಳಿಸಿದ್ದೆಂದು ಗೊತ್ತಿಲ್ಲ. ಆದರೆ ಹಿರಿಯ ಸಚಿವ ರಾಜಣ್ಣನವರು ಬಹಿರಂಗವಾಗೇ ಹನಿಟ್ರ್ಯಾಪ್ ಪ್ರಯತ್ನ ತನ್ನ ಮೇಲೆ ನಡೆಯುತ್ತಿದೆ ಎಂದಿದ್ದಾರೆ.

ಇನ್ನು ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹನಿಟ್ರ್ಯಾಪ್‌ ಅನ್ನು ಯಾಕೆ ಮಾಡುತ್ತಿದ್ದಾರೆ, ಯಾಕೆ ಬ್ಲ್ಯಾಕ್ ಮೇಲ್ ಪ್ರಯತ್ನ ನಡೆದಿದೆ ಎಂದು ಕರ್ನಾಟಕದ ಜನತೆಗೆ ಗೊತ್ತಾಗಬೇಕು. ಆದರೆ ಅವರ ಮಾತಿನ ಧಾಟಿ ನೋಡಿದರೆ ಕಾಂಗ್ರೆಸ್‌ ಪಕ್ಷದ ಮಂತ್ರಿಯೊಬ್ಬ ಭಾಗಿಯಾಗಿರುವಂತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

4 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

4 hours ago