ಪ್ರಯಾಗ್ರಾಜ್: ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ ಎಂದು ಸಾರ್ವಜನಿಕರಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಮನವಿ ಮಾಡಿದ್ದಾರೆ.
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ
ಪೋಸ್ಟ್ ಮಾಡಿರುವ ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ. ನಾವು ಸಾಧು-ಸಂತರ ಜೊತೆಗೆ ಮಾತನಾಡಿದ್ದೇವೆ. ಹೀಗಾಗಿ ಅವರು ಮೊದಲು ಭಕ್ತಾದಿಗಳು ಪುಣ್ಯಸ್ನಾನ ಮಾಡಿದ ನಂತರ ನಾವು ಸ್ನಾನ ಮಾಡುತ್ತೇವೆ ಎಂದು ಸಾಧು-ಸಂತರು ಹಾಗೂ ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಯಾವುದೇ ಘಾಟ್ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರಾಗಿದೆ. ಆರೋಗ್ಯ ಸಮಸ್ಯೆ ಇರುವವರು ದೂರ ನಡೆಯಬೇಡಿ. ಮೌನಿ ಅಮವಾಸ್ಯೆ ದಿನದಂದು ಗಂಗಾ ಸ್ನಾನ ಮಾಡುವುದರಿಂದ ಪುಣ್ಯ ಪ್ರಾಪ್ತಿ ದೊರೆಯಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜನಸ್ತೋಮ ಇರುವ ಹಿನ್ನೆಲೆ ಸಾರ್ವಜನಿಕರು ಸಂಯಮದಿಂದ ವರ್ತಿಸಿಬೇಕು. ಆಡಳಿತದ ಸೂಚನೆಗಳನ್ನು ಅನುಸರಿಸಿ ಹಾಗೂ ಅವರೊಂದಿಗೆ ಸಹಕರಿಸಬೇಕು. ಯಾವುದೇ ರೀತಿಯ ವದಂತಿಗಳಿಗಡ ಗಮನ ಕೊಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…