ದೇಶ- ವಿದೇಶ

ಗಂಗಾ ಮಾತೆಯ ಘಾಟ್‌ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ: ಯೋಗಿ ಅದಿತ್ಯನಾಥ್‌

ಪ್ರಯಾಗ್‌ರಾಜ್‌: ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ ಎಂದು ಸಾರ್ವಜನಿಕರಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ ಮನವಿ ಮಾಡಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ
ಪೋಸ್ಟ್‌ ಮಾಡಿರುವ ನೀವು ಇರುವ ಗಂಗಾ ಮಾತೆಯ ಘಾಟ್‌ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ. ನಾವು ಸಾಧು-ಸಂತರ ಜೊತೆಗೆ ಮಾತನಾಡಿದ್ದೇವೆ. ಹೀಗಾಗಿ ಅವರು ಮೊದಲು ಭಕ್ತಾದಿಗಳು ಪುಣ್ಯಸ್ನಾನ ಮಾಡಿದ ನಂತರ ನಾವು ಸ್ನಾನ ಮಾಡುತ್ತೇವೆ ಎಂದು ಸಾಧು-ಸಂತರು ಹಾಗೂ ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಯಾವುದೇ ಘಾಟ್‌ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರಾಗಿದೆ. ಆರೋಗ್ಯ ಸಮಸ್ಯೆ ಇರುವವರು ದೂರ ನಡೆಯಬೇಡಿ. ಮೌನಿ ಅಮವಾಸ್ಯೆ ದಿನದಂದು ಗಂಗಾ ಸ್ನಾನ ಮಾಡುವುದರಿಂದ ಪುಣ್ಯ ಪ್ರಾಪ್ತಿ ದೊರೆಯಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜನಸ್ತೋಮ ಇರುವ ಹಿನ್ನೆಲೆ ಸಾರ್ವಜನಿಕರು ಸಂಯಮದಿಂದ ವರ್ತಿಸಿಬೇಕು. ಆಡಳಿತದ ಸೂಚನೆಗಳನ್ನು ಅನುಸರಿಸಿ ಹಾಗೂ ಅವರೊಂದಿಗೆ ಸಹಕರಿಸಬೇಕು. ಯಾವುದೇ ರೀತಿಯ ವದಂತಿಗಳಿಗಡ ಗಮನ ಕೊಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago