ಪ್ರಯಾಗ್ರಾಜ್: ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ ಎಂದು ಸಾರ್ವಜನಿಕರಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಮನವಿ ಮಾಡಿದ್ದಾರೆ.
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ
ಪೋಸ್ಟ್ ಮಾಡಿರುವ ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ. ನಾವು ಸಾಧು-ಸಂತರ ಜೊತೆಗೆ ಮಾತನಾಡಿದ್ದೇವೆ. ಹೀಗಾಗಿ ಅವರು ಮೊದಲು ಭಕ್ತಾದಿಗಳು ಪುಣ್ಯಸ್ನಾನ ಮಾಡಿದ ನಂತರ ನಾವು ಸ್ನಾನ ಮಾಡುತ್ತೇವೆ ಎಂದು ಸಾಧು-ಸಂತರು ಹಾಗೂ ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಯಾವುದೇ ಘಾಟ್ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರಾಗಿದೆ. ಆರೋಗ್ಯ ಸಮಸ್ಯೆ ಇರುವವರು ದೂರ ನಡೆಯಬೇಡಿ. ಮೌನಿ ಅಮವಾಸ್ಯೆ ದಿನದಂದು ಗಂಗಾ ಸ್ನಾನ ಮಾಡುವುದರಿಂದ ಪುಣ್ಯ ಪ್ರಾಪ್ತಿ ದೊರೆಯಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜನಸ್ತೋಮ ಇರುವ ಹಿನ್ನೆಲೆ ಸಾರ್ವಜನಿಕರು ಸಂಯಮದಿಂದ ವರ್ತಿಸಿಬೇಕು. ಆಡಳಿತದ ಸೂಚನೆಗಳನ್ನು ಅನುಸರಿಸಿ ಹಾಗೂ ಅವರೊಂದಿಗೆ ಸಹಕರಿಸಬೇಕು. ಯಾವುದೇ ರೀತಿಯ ವದಂತಿಗಳಿಗಡ ಗಮನ ಕೊಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…