ದೇಶ- ವಿದೇಶ

ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ

ಕೊಲ್ಕತ್ತಾ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್‌ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.

ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದನ್ನು ಓದಿ : ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ

ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago