ದೇಶ- ವಿದೇಶ

ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ

ಕೊಲ್ಕತ್ತಾ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್‌ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.

ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದನ್ನು ಓದಿ : ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ

ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದರು.

ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago