ಕೊಲ್ಕತ್ತಾ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಇದನ್ನು ಓದಿ : ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು : ದೀದಿ ವಿವಾದಾತ್ಮಕ ಹೇಳಿಕ
ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದರು.
ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದರು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…