ತಿರುವನಂತಪುರಂ: ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಆರೋಪಿಯನ್ನು ಪೆರುಮಳದ ನಿವಾಸಿ ಅಪ್ಸಾನ್ ಎಂದು ಗುರುತಿಸಲಾಗಿದೆ. ನಾನು ನನ್ನ ತಾಯಿ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಹಾಗೂ ಗೆಳತಿಯನ್ನು ಮೂರು ವಿವಿಧ ನಿವಾಸಗಳಲ್ಲಿ ಕೊಂದಿದ್ದೇನೆ ಎಂದು ಆತ ಹೇಳಿಕೊಂಡಿದ್ದಾನೆ.
ಮೂರು ಕಡೆಗಳಲ್ಲಿ ಆರೋಪಿ ಅಪ್ಸಾನ್ ಕೇವಲ ಎರಡು ಗಂಟೆಗಳಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಅಪ್ಸಾನ್ ಠಾಣೆಗೆ ತೆರಳುವುದಕ್ಕೂ ಮುಂಚೆ ವಿಷ ಸೇವಿಸಿದ್ದ ಎನ್ನಲಾಗಿದ್ದು, ಆತನನ್ನು ಸಹ ಪೊಲೀಸರು ತಿರುವನಂತಪುರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪ್ಸಾನ್ ತನ್ನ ಅಜ್ಜಿಯ ಒಡವೆಗಳಿಗಾಗಿ ಆಕೆಯನ್ನು ಕೋರಿದ್ದ ಎಂದು ಹೇಳಲಾಗಿದೆ. ನನ್ನ ಸಂಬಂಧಿಕರು ನನಗೆ ಹಣಕಾಸು ನೆರವು ನೀಡಲು ನಿರಾಕರಿಸಿದ್ದರಿಂದ ನಾನು ಅವರನ್ನೆಲ್ಲಾ ಹತ್ಯೆಗೈದಿದ್ದೇನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…