ತಿರುವನಂತಪುರಂ: ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಆರೋಪಿಯನ್ನು ಪೆರುಮಳದ ನಿವಾಸಿ ಅಪ್ಸಾನ್ ಎಂದು ಗುರುತಿಸಲಾಗಿದೆ. ನಾನು ನನ್ನ ತಾಯಿ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಹಾಗೂ ಗೆಳತಿಯನ್ನು ಮೂರು ವಿವಿಧ ನಿವಾಸಗಳಲ್ಲಿ ಕೊಂದಿದ್ದೇನೆ ಎಂದು ಆತ ಹೇಳಿಕೊಂಡಿದ್ದಾನೆ.
ಮೂರು ಕಡೆಗಳಲ್ಲಿ ಆರೋಪಿ ಅಪ್ಸಾನ್ ಕೇವಲ ಎರಡು ಗಂಟೆಗಳಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಅಪ್ಸಾನ್ ಠಾಣೆಗೆ ತೆರಳುವುದಕ್ಕೂ ಮುಂಚೆ ವಿಷ ಸೇವಿಸಿದ್ದ ಎನ್ನಲಾಗಿದ್ದು, ಆತನನ್ನು ಸಹ ಪೊಲೀಸರು ತಿರುವನಂತಪುರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪ್ಸಾನ್ ತನ್ನ ಅಜ್ಜಿಯ ಒಡವೆಗಳಿಗಾಗಿ ಆಕೆಯನ್ನು ಕೋರಿದ್ದ ಎಂದು ಹೇಳಲಾಗಿದೆ. ನನ್ನ ಸಂಬಂಧಿಕರು ನನಗೆ ಹಣಕಾಸು ನೆರವು ನೀಡಲು ನಿರಾಕರಿಸಿದ್ದರಿಂದ ನಾನು ಅವರನ್ನೆಲ್ಲಾ ಹತ್ಯೆಗೈದಿದ್ದೇನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…