ದೇಶ- ವಿದೇಶ

ಸತ್ಯ ಮತ್ತು ನ್ಯಾಯ ಖಂಡಿತ ಮೇಲುಗೈ ಸಾಧಿಸುತ್ತದೆ: ಯುವ ಆರೋಪಕ್ಕೆ ಪತ್ನಿ ಟಕ್ಕರ್‌

ವರನಟ ರಾಜ್‌ಕುಮಾರ್‌ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್‌ ಕುಮಾರ್‌ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ ವಕೀಲರು ಯುವ ಪತ್ನಿ ಶ್ರೀದೇವಿ ವಿರುದ್ಧ ಹಲವಾರು ಆರೋಪ ಮಾಡಿದ್ದಾರೆ.

ಯುವ ರಾಜ್‌ಕುಮಾರ್‌ ಅವರಿಗೆ ಅವರ ಪತ್ನಿ ಶ್ರೀದೇವಿ ಅವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನಿನ್ನ ಮಾನವನ್ನು ಬೀದಿಗೆ ಹರಾಜು ಹಾಕುತ್ತೇನೆ ಎಂದು ಬೆದರಿಸುತ್ತಿದ್ದಾರೆ. ರಾಜ್‌ಕುಮಾರ್‌ ಅಕಾಡೆಮಿಯಿಂದ ವೈಯಕ್ತಿಕ ಖಾತೆಗೆ 3 ಕೋಟಿ ರೂಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಅಮೇರಿಕಾಕ್ಕೆ ತೆರಳಿ ಬಾಯ್‌ಫ್ರೆಂಡ್‌ ಮೂಲಕ ಮಗು ಪಡೆಯುವ ಯೋಜನೆಯಲಿದ್ದಾರೆ ಅವರಿಗೆ ರಾಧಯ್ಯ ಎಂಬ ಬಾಯ್‌ಫ್ರೆಂಡ್‌ ಇದ್ದಾರೆ ಎಂದು ಆರೋಪಿಸಿದ್ದರು.

ಇನ್ನು ಈ ಎಲ್ಲಾ ಆರೋಪಗಳಿಗೆ ಪೋಸ್ಟ್‌ ಮೂಲಕ ತಿರುಗೇಟು ನೀಡಿದ್ದಾರೆ. “ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.

ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ.

ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ” ಎಂದು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago