ದೇಶ- ವಿದೇಶ

ಸತ್ಯ ಮತ್ತು ನ್ಯಾಯ ಖಂಡಿತ ಮೇಲುಗೈ ಸಾಧಿಸುತ್ತದೆ: ಯುವ ಆರೋಪಕ್ಕೆ ಪತ್ನಿ ಟಕ್ಕರ್‌

ವರನಟ ರಾಜ್‌ಕುಮಾರ್‌ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್‌ ಕುಮಾರ್‌ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ ವಕೀಲರು ಯುವ ಪತ್ನಿ ಶ್ರೀದೇವಿ ವಿರುದ್ಧ ಹಲವಾರು ಆರೋಪ ಮಾಡಿದ್ದಾರೆ.

ಯುವ ರಾಜ್‌ಕುಮಾರ್‌ ಅವರಿಗೆ ಅವರ ಪತ್ನಿ ಶ್ರೀದೇವಿ ಅವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನಿನ್ನ ಮಾನವನ್ನು ಬೀದಿಗೆ ಹರಾಜು ಹಾಕುತ್ತೇನೆ ಎಂದು ಬೆದರಿಸುತ್ತಿದ್ದಾರೆ. ರಾಜ್‌ಕುಮಾರ್‌ ಅಕಾಡೆಮಿಯಿಂದ ವೈಯಕ್ತಿಕ ಖಾತೆಗೆ 3 ಕೋಟಿ ರೂಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಅಮೇರಿಕಾಕ್ಕೆ ತೆರಳಿ ಬಾಯ್‌ಫ್ರೆಂಡ್‌ ಮೂಲಕ ಮಗು ಪಡೆಯುವ ಯೋಜನೆಯಲಿದ್ದಾರೆ ಅವರಿಗೆ ರಾಧಯ್ಯ ಎಂಬ ಬಾಯ್‌ಫ್ರೆಂಡ್‌ ಇದ್ದಾರೆ ಎಂದು ಆರೋಪಿಸಿದ್ದರು.

ಇನ್ನು ಈ ಎಲ್ಲಾ ಆರೋಪಗಳಿಗೆ ಪೋಸ್ಟ್‌ ಮೂಲಕ ತಿರುಗೇಟು ನೀಡಿದ್ದಾರೆ. “ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.

ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ.

ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ” ಎಂದು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago