ವರನಟ ರಾಜ್ಕುಮಾರ್ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್ ಕುಮಾರ್ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ ವಕೀಲರು ಯುವ ಪತ್ನಿ ಶ್ರೀದೇವಿ ವಿರುದ್ಧ ಹಲವಾರು ಆರೋಪ ಮಾಡಿದ್ದಾರೆ.
ಯುವ ರಾಜ್ಕುಮಾರ್ ಅವರಿಗೆ ಅವರ ಪತ್ನಿ ಶ್ರೀದೇವಿ ಅವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನಿನ್ನ ಮಾನವನ್ನು ಬೀದಿಗೆ ಹರಾಜು ಹಾಕುತ್ತೇನೆ ಎಂದು ಬೆದರಿಸುತ್ತಿದ್ದಾರೆ. ರಾಜ್ಕುಮಾರ್ ಅಕಾಡೆಮಿಯಿಂದ ವೈಯಕ್ತಿಕ ಖಾತೆಗೆ 3 ಕೋಟಿ ರೂಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಅಮೇರಿಕಾಕ್ಕೆ ತೆರಳಿ ಬಾಯ್ಫ್ರೆಂಡ್ ಮೂಲಕ ಮಗು ಪಡೆಯುವ ಯೋಜನೆಯಲಿದ್ದಾರೆ ಅವರಿಗೆ ರಾಧಯ್ಯ ಎಂಬ ಬಾಯ್ಫ್ರೆಂಡ್ ಇದ್ದಾರೆ ಎಂದು ಆರೋಪಿಸಿದ್ದರು.
ಇನ್ನು ಈ ಎಲ್ಲಾ ಆರೋಪಗಳಿಗೆ ಪೋಸ್ಟ್ ಮೂಲಕ ತಿರುಗೇಟು ನೀಡಿದ್ದಾರೆ. “ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.
ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ.
ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ” ಎಂದು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…