ವರನಟ ರಾಜ್ಕುಮಾರ್ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್ ಕುಮಾರ್ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ ವಕೀಲರು ಯುವ ಪತ್ನಿ ಶ್ರೀದೇವಿ ವಿರುದ್ಧ ಹಲವಾರು ಆರೋಪ ಮಾಡಿದ್ದಾರೆ.
ಯುವ ರಾಜ್ಕುಮಾರ್ ಅವರಿಗೆ ಅವರ ಪತ್ನಿ ಶ್ರೀದೇವಿ ಅವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನಿನ್ನ ಮಾನವನ್ನು ಬೀದಿಗೆ ಹರಾಜು ಹಾಕುತ್ತೇನೆ ಎಂದು ಬೆದರಿಸುತ್ತಿದ್ದಾರೆ. ರಾಜ್ಕುಮಾರ್ ಅಕಾಡೆಮಿಯಿಂದ ವೈಯಕ್ತಿಕ ಖಾತೆಗೆ 3 ಕೋಟಿ ರೂಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಅಮೇರಿಕಾಕ್ಕೆ ತೆರಳಿ ಬಾಯ್ಫ್ರೆಂಡ್ ಮೂಲಕ ಮಗು ಪಡೆಯುವ ಯೋಜನೆಯಲಿದ್ದಾರೆ ಅವರಿಗೆ ರಾಧಯ್ಯ ಎಂಬ ಬಾಯ್ಫ್ರೆಂಡ್ ಇದ್ದಾರೆ ಎಂದು ಆರೋಪಿಸಿದ್ದರು.
ಇನ್ನು ಈ ಎಲ್ಲಾ ಆರೋಪಗಳಿಗೆ ಪೋಸ್ಟ್ ಮೂಲಕ ತಿರುಗೇಟು ನೀಡಿದ್ದಾರೆ. “ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.
ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ.
ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ” ಎಂದು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…