ದೇಶ- ವಿದೇಶ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ ; ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ನಿರ್ದೇಶಕರ ಸಂಸ್ಥೆ (IOD) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪರಿಸರ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯ 26ನೇ ಅಂತಾರಾಷ್ಟ್ರೀಯ ಸಮ್ಮೇಳನ (ICEM) ದಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವರು; ಇಂಗಾಲ ಹೊರಸುವಿಕೆ ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿರುವ ಕೈಗಾರಿಕೆ ಕಂಪನಿಗಳಿಗೆ ‘IOD ಗೋಲ್ಡನ್ ಪೀಕಾಕ್’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಅಲ್ಲದೆ, ದೇಶದ ಪ್ರಗತಿ, ಆರ್ಥಿಕ ವೃದ್ಧಿಯಲ್ಲಿ ಕಾರ್ಪೊರೇಟ್ ಕಾರ್ಯತಂತ್ರದ ಮೂಲದಲ್ಲಿ ಗಂಭೀರ ಹಾಗೂ ದೂರಗಾಮಿ ಸುಸ್ಥಿರತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಉದ್ಯಮದ ನಾಯಕರಿಗೆ ಸಚಿವರು ಕರೆ ನೀಡಿದರು.

ಜಾಗತಿಕ ಸಂಚಿತ ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕೇವಲ 4% ಕೊಡುಗೆ ನೀಡುತ್ತಿದ್ದರೂ, ಭಾರತವು ತನ್ನ ಹವಾಮಾನ ಬದ್ಧತೆಗಳ ಕಡೆಗೆ ದೃಢನಿಶ್ಚಯದ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಸಚಿವರು ಹೇಳಿದರು.

“ಭಾರತದ ತಲಾ ಇಂಗಾಲ ಹೊರಸೂಸುವಿಕೆ ಕೇವಲ 1.89 ಟನ್‌ಗಳಾಗಿದ್ದು, ಇದು ಜಾಗತಿಕ ಸರಾಸರಿಗಿಂತ ಅರ್ಧಕ್ಕಿಂತ ಕಡಿಮೆ. ಆದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, 2030ರ ವೇಳೆಗೆ 500 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ಮತ್ತು 2070ರ ವೇಳೆಗೆ ನಿವ್ವಳ ಶೂನ್ಯವನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಚಿವರು ಒತ್ತಿ ಹೇಳಿದರು.

ಭಾರತದ ಕೈಗಾರಿಕಾ ವಲಯದಾದ್ಯಂತ ಪರಿಸರ ನಿರ್ವಹಣೆ, ಪರಿಸರ-ನಾವೀನ್ಯತೆ ಮತ್ತು ಔದ್ಯೋಗಿಕ ಸುರಕ್ಷತೆಗೆ ಅತ್ಯುತ್ತಮ ಕೊಡುಗೆಗಳನ್ನು ಗೋಲ್ಡನ್ ಪೀಕಾಕ್ ಪ್ರಶಸ್ತಿಗಳು ಗುರುತಿಸಿವೆ ಎಂದ ಸಚಿವರು; ಖಾಸಗಿ ವಲಯವು ನಾವೀನ್ಯತೆ ಮತ್ತು ಹಸಿರು ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ದಿಟ್ಟ, ದೀರ್ಘಕಾಲೀನ ಪಣತೊಡಬೇಕೆಂದು ನುಡಿದರು.

ಈ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು, ಹಿರಿಯ ಅಧಿಕಾರಿಗಳು ಮತ್ತು ಕೈಗಾರಿಕೆ, ಶೈಕ್ಷಣಿಕ ಮತ್ತು ಬಹುಪಕ್ಷೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

3 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

3 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

4 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

4 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

5 hours ago