Zero coal emissions in steel and industrial sector Union Minister Kumaraswamy
ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ನಿರ್ದೇಶಕರ ಸಂಸ್ಥೆ (IOD) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪರಿಸರ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯ 26ನೇ ಅಂತಾರಾಷ್ಟ್ರೀಯ ಸಮ್ಮೇಳನ (ICEM) ದಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವರು; ಇಂಗಾಲ ಹೊರಸುವಿಕೆ ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿರುವ ಕೈಗಾರಿಕೆ ಕಂಪನಿಗಳಿಗೆ ‘IOD ಗೋಲ್ಡನ್ ಪೀಕಾಕ್’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಅಲ್ಲದೆ, ದೇಶದ ಪ್ರಗತಿ, ಆರ್ಥಿಕ ವೃದ್ಧಿಯಲ್ಲಿ ಕಾರ್ಪೊರೇಟ್ ಕಾರ್ಯತಂತ್ರದ ಮೂಲದಲ್ಲಿ ಗಂಭೀರ ಹಾಗೂ ದೂರಗಾಮಿ ಸುಸ್ಥಿರತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಉದ್ಯಮದ ನಾಯಕರಿಗೆ ಸಚಿವರು ಕರೆ ನೀಡಿದರು.
ಜಾಗತಿಕ ಸಂಚಿತ ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕೇವಲ 4% ಕೊಡುಗೆ ನೀಡುತ್ತಿದ್ದರೂ, ಭಾರತವು ತನ್ನ ಹವಾಮಾನ ಬದ್ಧತೆಗಳ ಕಡೆಗೆ ದೃಢನಿಶ್ಚಯದ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಸಚಿವರು ಹೇಳಿದರು.
“ಭಾರತದ ತಲಾ ಇಂಗಾಲ ಹೊರಸೂಸುವಿಕೆ ಕೇವಲ 1.89 ಟನ್ಗಳಾಗಿದ್ದು, ಇದು ಜಾಗತಿಕ ಸರಾಸರಿಗಿಂತ ಅರ್ಧಕ್ಕಿಂತ ಕಡಿಮೆ. ಆದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, 2030ರ ವೇಳೆಗೆ 500 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ಮತ್ತು 2070ರ ವೇಳೆಗೆ ನಿವ್ವಳ ಶೂನ್ಯವನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಚಿವರು ಒತ್ತಿ ಹೇಳಿದರು.
ಭಾರತದ ಕೈಗಾರಿಕಾ ವಲಯದಾದ್ಯಂತ ಪರಿಸರ ನಿರ್ವಹಣೆ, ಪರಿಸರ-ನಾವೀನ್ಯತೆ ಮತ್ತು ಔದ್ಯೋಗಿಕ ಸುರಕ್ಷತೆಗೆ ಅತ್ಯುತ್ತಮ ಕೊಡುಗೆಗಳನ್ನು ಗೋಲ್ಡನ್ ಪೀಕಾಕ್ ಪ್ರಶಸ್ತಿಗಳು ಗುರುತಿಸಿವೆ ಎಂದ ಸಚಿವರು; ಖಾಸಗಿ ವಲಯವು ನಾವೀನ್ಯತೆ ಮತ್ತು ಹಸಿರು ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ದಿಟ್ಟ, ದೀರ್ಘಕಾಲೀನ ಪಣತೊಡಬೇಕೆಂದು ನುಡಿದರು.
ಈ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು, ಹಿರಿಯ ಅಧಿಕಾರಿಗಳು ಮತ್ತು ಕೈಗಾರಿಕೆ, ಶೈಕ್ಷಣಿಕ ಮತ್ತು ಬಹುಪಕ್ಷೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…