ದೇಶ- ವಿದೇಶ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ ; ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ನಿರ್ದೇಶಕರ ಸಂಸ್ಥೆ (IOD) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪರಿಸರ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯ 26ನೇ ಅಂತಾರಾಷ್ಟ್ರೀಯ ಸಮ್ಮೇಳನ (ICEM) ದಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವರು; ಇಂಗಾಲ ಹೊರಸುವಿಕೆ ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿರುವ ಕೈಗಾರಿಕೆ ಕಂಪನಿಗಳಿಗೆ ‘IOD ಗೋಲ್ಡನ್ ಪೀಕಾಕ್’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಅಲ್ಲದೆ, ದೇಶದ ಪ್ರಗತಿ, ಆರ್ಥಿಕ ವೃದ್ಧಿಯಲ್ಲಿ ಕಾರ್ಪೊರೇಟ್ ಕಾರ್ಯತಂತ್ರದ ಮೂಲದಲ್ಲಿ ಗಂಭೀರ ಹಾಗೂ ದೂರಗಾಮಿ ಸುಸ್ಥಿರತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಉದ್ಯಮದ ನಾಯಕರಿಗೆ ಸಚಿವರು ಕರೆ ನೀಡಿದರು.

ಜಾಗತಿಕ ಸಂಚಿತ ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕೇವಲ 4% ಕೊಡುಗೆ ನೀಡುತ್ತಿದ್ದರೂ, ಭಾರತವು ತನ್ನ ಹವಾಮಾನ ಬದ್ಧತೆಗಳ ಕಡೆಗೆ ದೃಢನಿಶ್ಚಯದ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಸಚಿವರು ಹೇಳಿದರು.

“ಭಾರತದ ತಲಾ ಇಂಗಾಲ ಹೊರಸೂಸುವಿಕೆ ಕೇವಲ 1.89 ಟನ್‌ಗಳಾಗಿದ್ದು, ಇದು ಜಾಗತಿಕ ಸರಾಸರಿಗಿಂತ ಅರ್ಧಕ್ಕಿಂತ ಕಡಿಮೆ. ಆದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, 2030ರ ವೇಳೆಗೆ 500 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ಮತ್ತು 2070ರ ವೇಳೆಗೆ ನಿವ್ವಳ ಶೂನ್ಯವನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಚಿವರು ಒತ್ತಿ ಹೇಳಿದರು.

ಭಾರತದ ಕೈಗಾರಿಕಾ ವಲಯದಾದ್ಯಂತ ಪರಿಸರ ನಿರ್ವಹಣೆ, ಪರಿಸರ-ನಾವೀನ್ಯತೆ ಮತ್ತು ಔದ್ಯೋಗಿಕ ಸುರಕ್ಷತೆಗೆ ಅತ್ಯುತ್ತಮ ಕೊಡುಗೆಗಳನ್ನು ಗೋಲ್ಡನ್ ಪೀಕಾಕ್ ಪ್ರಶಸ್ತಿಗಳು ಗುರುತಿಸಿವೆ ಎಂದ ಸಚಿವರು; ಖಾಸಗಿ ವಲಯವು ನಾವೀನ್ಯತೆ ಮತ್ತು ಹಸಿರು ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ದಿಟ್ಟ, ದೀರ್ಘಕಾಲೀನ ಪಣತೊಡಬೇಕೆಂದು ನುಡಿದರು.

ಈ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು, ಹಿರಿಯ ಅಧಿಕಾರಿಗಳು ಮತ್ತು ಕೈಗಾರಿಕೆ, ಶೈಕ್ಷಣಿಕ ಮತ್ತು ಬಹುಪಕ್ಷೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

2 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

2 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

3 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago