ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 55 ವರ್ಷದ ಮಹಿಳೆಯಲ್ಲಿ ಝೀಕಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರದವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ 28 ಹಾಗೂ 35 ವರ್ಷದ ಇಬ್ಬರು ಗರ್ಭಿಣಿಯರಲ್ಲಿ ಸೋಂಕು ಇರುವುದು ದೃಢವಾಗಿತ್ತು.
ಇಂದು ಪತ್ತೆಯಾದ ಪ್ರಕರಣದಲ್ಲಿ ದಹಾನುಕಲ್ ಕಾಲೋನಿಯ ಮಹಿಳೆಯು ತುರಿಕೆ ಹಾಗೂ ಸಂಧಿ ನೋವು ಸಮಸ್ಯೆಯಿಂದ ಬಳಲುತ್ತಿದ್ದರು. ತಪಾಸಣೆ ನಡೆಸಿದ ನಂತರ ಇವರಲ್ಲಿ ಝೀಕಾ ವೈರಾಣು ಇರುವುದು ಖಚಿತವಾಗಿದೆ. ಮಹಿಳೆ ಆರೋಗ್ಯವಾಗಿದ್ದಾರೆ. ಆಸ್ಪತ್ರೆ ದಾಖಲಾತಿಯ ಅಗತ್ಯವಿಲ್ಲ ಎಂದು ಪುಣೆ ಮಹಾನಗರ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗರ್ಭಿಣಿಯರಲ್ಲಿ ಝೀಕಾ ವೈರಾಣುವಿನ ಸೋಂಕು ಉಲ್ಬಣಿಸಿದ್ದಲ್ಲಿ ಮೈಕ್ರೊಸೆಫಲಿ ಸಮಸ್ಯೆ ಎದುರಾಗುವ ಅಪಾಯವಿದೆ. ಇದರಲ್ಲಿ ಭ್ರೂಣದ ತಲೆಯ ಗಾತ್ರ ಚಿಕ್ಕದಾಗಿ ಮೆದುಳು ಬೆಳವಣಿಗೆಯಾಗದಿರುವ ಅಪಾಯವೂ ಇದೆ ಎಂದು ತಜ್ಞರು ಹೇಳಿದ್ದಾರೆ.
ಝೀಕಾ ವೈರಸ್ ಹರಡಲು ಏಡಿಸ್ ಸೊಳ್ಳೆಯು ವಾಹಕದಂತೆ ಕೆಲಸ ಮಾಡುತ್ತದೆ. ಸೋಂಕು ಇರುವ ವ್ಯಕ್ತಿಗೆ ಕಚ್ಚಿ ರಕ್ತ ಹೀರುವ ಇವುಗಳು, ಆರೋಗ್ಯವಂತ ವ್ಯಕ್ತಿಗೂ ಕಚ್ಚಿದರೆ ಅವರಿಗೂ ಸೋಂಕು ತಗುಲುವ ಅಪಾಯವಿದೆ. ಡೆಂಗ್ಯೂ ಹಾಗೂ ಚಿಕನ್ಗುನ್ಯದಂತೆಯೇ ಝೀಕಾ ಕೂಡಾ ಒಬ್ಬರಿಗೆ ಹರಡುತ್ತದೆ.
ಝೀಕಾ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಪುಣೆಯ ಮಹಾನಗರ ಪಾಲಿಕೆ ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಬಡಾವಣೆಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…