ದೇಶ- ವಿದೇಶ

ಪುಣೆಯಲ್ಲಿ ಝೀಕಾ ವೈರಸ್‌ ಅಬ್ಬರ: ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಠಿಣ ಕ್ರಮ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 55 ವರ್ಷದ ಮಹಿಳೆಯಲ್ಲಿ ಝೀಕಾ ವೈರಸ್‌ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಮವಾರದವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ 28 ಹಾಗೂ 35 ವರ್ಷದ ಇಬ್ಬರು ಗರ್ಭಿಣಿಯರಲ್ಲಿ ಸೋಂಕು ಇರುವುದು ದೃಢವಾಗಿತ್ತು.

ಇಂದು ಪತ್ತೆಯಾದ ಪ್ರಕರಣದಲ್ಲಿ ದಹಾನುಕಲ್‌ ಕಾಲೋನಿಯ ಮಹಿಳೆಯು ತುರಿಕೆ ಹಾಗೂ ಸಂಧಿ ನೋವು ಸಮಸ್ಯೆಯಿಂದ ಬಳಲುತ್ತಿದ್ದರು. ತಪಾಸಣೆ ನಡೆಸಿದ ನಂತರ ಇವರಲ್ಲಿ ಝೀಕಾ ವೈರಾಣು ಇರುವುದು ಖಚಿತವಾಗಿದೆ. ಮಹಿಳೆ ಆರೋಗ್ಯವಾಗಿದ್ದಾರೆ. ಆಸ್ಪತ್ರೆ ದಾಖಲಾತಿಯ ಅಗತ್ಯವಿಲ್ಲ ಎಂದು ಪುಣೆ ಮಹಾನಗರ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗರ್ಭಿಣಿಯರಲ್ಲಿ ಝೀಕಾ ವೈರಾಣುವಿನ ಸೋಂಕು ಉಲ್ಬಣಿಸಿದ್ದಲ್ಲಿ ಮೈಕ್ರೊಸೆಫಲಿ ಸಮಸ್ಯೆ ಎದುರಾಗುವ ಅಪಾಯವಿದೆ. ಇದರಲ್ಲಿ ಭ್ರೂಣದ ತಲೆಯ ಗಾತ್ರ ಚಿಕ್ಕದಾಗಿ ಮೆದುಳು ಬೆಳವಣಿಗೆಯಾಗದಿರುವ ಅಪಾಯವೂ ಇದೆ ಎಂದು ತಜ್ಞರು ಹೇಳಿದ್ದಾರೆ.

ಝೀಕಾ ವೈರಸ್‌ ಹರಡಲು ಏಡಿಸ್‌ ಸೊಳ್ಳೆಯು ವಾಹಕದಂತೆ ಕೆಲಸ ಮಾಡುತ್ತದೆ. ಸೋಂಕು ಇರುವ ವ್ಯಕ್ತಿಗೆ ಕಚ್ಚಿ ರಕ್ತ ಹೀರುವ ಇವುಗಳು, ಆರೋಗ್ಯವಂತ ವ್ಯಕ್ತಿಗೂ ಕಚ್ಚಿದರೆ ಅವರಿಗೂ ಸೋಂಕು ತಗುಲುವ ಅಪಾಯವಿದೆ. ಡೆಂಗ್ಯೂ ಹಾಗೂ ಚಿಕನ್‌ಗುನ್ಯದಂತೆಯೇ ಝೀಕಾ ಕೂಡಾ ಒಬ್ಬರಿಗೆ ಹರಡುತ್ತದೆ.

ಝೀಕಾ ವೈರಸ್‌ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಪುಣೆಯ ಮಹಾನಗರ ಪಾಲಿಕೆ ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಬಡಾವಣೆಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

58 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

1 hour ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

4 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

7 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

7 hours ago