ಅಮರಾವತಿ: ಅಂಡರ್ ವರ್ಲ್ಡ್ ಹಾಗೂ ಮಾಸ್ ಚಿತ್ರಗಳಿಗೆ ಹೆಸರಾದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ತಲೆ ಕಡಿದು ತಂದವರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ತೆಲುಗು ದೇಶಂ ಪಕ್ಷ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಹೇಳಿಕೆ ನೀಡಿದ್ದಾರೆ.
ರಾಮ್ ಗೋಪಾಲ್ ವರ್ಮಾ ನಿರ್ದೇಶನದ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು, ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ವ್ಯೂಹಂ ಸಿನಿಮಾ ಆಂಧ್ರದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ರಾಮ್ ಗೋಪಾಲ್ ವರ್ಮಾ, ಕೋಳಿಕಪುಡಿ ಶ್ರೀನಿವಾಸ್ ನಾಯ್ಡು ವಿರುದ್ಧ ಆಂಧ್ರಪ್ರದೇಶ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…