ರಾಷ್ಟ್ರೀಯ

ಬಜೆಟ್‌ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ವಾಪಸ್‌

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲಾ ಸಂಸದರ ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿಕೆ ನೀಡಿದ್ದಾರೆ. ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಸಂಸತ್ ಭವನದಲ್ಲಿ ಉಂಟಾಗಿದ್ದ ಭದ್ರತಾ ಲೋಪದ ಕುರಿತಾಗಿ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಒಟ್ಟು 146 ಸಂಸದರನ್ನು ಅಮಾನತುಗೊಳಿಸಲಾಗಿತ್ತು.

ಈ ಪೈಕಿ 132 ಸಂಸದರನ್ನು ಚಳಿಗಾಲದ ಉಳಿದ ಅವಧಿವರೆಗೆ ಅಮಾನತುಗೊಳಿಸಲಾಗಿತ್ತು. ಉಳಿದ 14 ಸಂಸದರನ್ನು ( ರಾಜ್ಯಸಭೆಯ 11 ಹಾಗೂ ಲೋಕಸಭೆಯ 3 ಸಂಸದರು ) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ಲೋಕಸಭಾ ಸದಸ್ಯರ ಅಮಾನತನ್ನು ವಿಶೇಷಾಧಿಕಾರ ಸಮಿತಿಗಳು ಜನವರಿ 13ರಂದು ಹಿಂಪಡೆದಿತ್ತು. ಇಂದು 11 ರಾಜ್ಯಸಭಾ ಸದಸ್ಯರ ಅಮಾನತನ್ನು ಹಿಂಪಡೆಯಲಾಗಿದೆ.

andolana

Recent Posts

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

38 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

5 hours ago