ರಾಷ್ಟ್ರೀಯ

ಬಜೆಟ್‌ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ವಾಪಸ್‌

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲಾ ಸಂಸದರ ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿಕೆ ನೀಡಿದ್ದಾರೆ. ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಸಂಸತ್ ಭವನದಲ್ಲಿ ಉಂಟಾಗಿದ್ದ ಭದ್ರತಾ ಲೋಪದ ಕುರಿತಾಗಿ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಒಟ್ಟು 146 ಸಂಸದರನ್ನು ಅಮಾನತುಗೊಳಿಸಲಾಗಿತ್ತು.

ಈ ಪೈಕಿ 132 ಸಂಸದರನ್ನು ಚಳಿಗಾಲದ ಉಳಿದ ಅವಧಿವರೆಗೆ ಅಮಾನತುಗೊಳಿಸಲಾಗಿತ್ತು. ಉಳಿದ 14 ಸಂಸದರನ್ನು ( ರಾಜ್ಯಸಭೆಯ 11 ಹಾಗೂ ಲೋಕಸಭೆಯ 3 ಸಂಸದರು ) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ಲೋಕಸಭಾ ಸದಸ್ಯರ ಅಮಾನತನ್ನು ವಿಶೇಷಾಧಿಕಾರ ಸಮಿತಿಗಳು ಜನವರಿ 13ರಂದು ಹಿಂಪಡೆದಿತ್ತು. ಇಂದು 11 ರಾಜ್ಯಸಭಾ ಸದಸ್ಯರ ಅಮಾನತನ್ನು ಹಿಂಪಡೆಯಲಾಗಿದೆ.

andolana

Recent Posts

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

4 mins ago

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…

22 mins ago

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು…

42 mins ago

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

1 hour ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

2 hours ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

2 hours ago