11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲಾ ಸಂಸದರ ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿಕೆ ನೀಡಿದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಸಂಸತ್ ಭವನದಲ್ಲಿ ಉಂಟಾಗಿದ್ದ ಭದ್ರತಾ ಲೋಪದ ಕುರಿತಾಗಿ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಒಟ್ಟು 146 ಸಂಸದರನ್ನು ಅಮಾನತುಗೊಳಿಸಲಾಗಿತ್ತು.
ಈ ಪೈಕಿ 132 ಸಂಸದರನ್ನು ಚಳಿಗಾಲದ ಉಳಿದ ಅವಧಿವರೆಗೆ ಅಮಾನತುಗೊಳಿಸಲಾಗಿತ್ತು. ಉಳಿದ 14 ಸಂಸದರನ್ನು ( ರಾಜ್ಯಸಭೆಯ 11 ಹಾಗೂ ಲೋಕಸಭೆಯ 3 ಸಂಸದರು ) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ಲೋಕಸಭಾ ಸದಸ್ಯರ ಅಮಾನತನ್ನು ವಿಶೇಷಾಧಿಕಾರ ಸಮಿತಿಗಳು ಜನವರಿ 13ರಂದು ಹಿಂಪಡೆದಿತ್ತು. ಇಂದು 11 ರಾಜ್ಯಸಭಾ ಸದಸ್ಯರ ಅಮಾನತನ್ನು ಹಿಂಪಡೆಯಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…