ರಾಷ್ಟ್ರೀಯ

ಬಜೆಟ್‌ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ವಾಪಸ್‌

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲಾ ಸಂಸದರ ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿಕೆ ನೀಡಿದ್ದಾರೆ. ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಸಂಸತ್ ಭವನದಲ್ಲಿ ಉಂಟಾಗಿದ್ದ ಭದ್ರತಾ ಲೋಪದ ಕುರಿತಾಗಿ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಒಟ್ಟು 146 ಸಂಸದರನ್ನು ಅಮಾನತುಗೊಳಿಸಲಾಗಿತ್ತು.

ಈ ಪೈಕಿ 132 ಸಂಸದರನ್ನು ಚಳಿಗಾಲದ ಉಳಿದ ಅವಧಿವರೆಗೆ ಅಮಾನತುಗೊಳಿಸಲಾಗಿತ್ತು. ಉಳಿದ 14 ಸಂಸದರನ್ನು ( ರಾಜ್ಯಸಭೆಯ 11 ಹಾಗೂ ಲೋಕಸಭೆಯ 3 ಸಂಸದರು ) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ಲೋಕಸಭಾ ಸದಸ್ಯರ ಅಮಾನತನ್ನು ವಿಶೇಷಾಧಿಕಾರ ಸಮಿತಿಗಳು ಜನವರಿ 13ರಂದು ಹಿಂಪಡೆದಿತ್ತು. ಇಂದು 11 ರಾಜ್ಯಸಭಾ ಸದಸ್ಯರ ಅಮಾನತನ್ನು ಹಿಂಪಡೆಯಲಾಗಿದೆ.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

1 hour ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

2 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

2 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

3 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

4 hours ago