ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಬರಿಮಲೆಗೆ ಬರುವ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಡಿಸೆಂಬರ್ 6ರಿಂದ ಪ್ರತಿದಿನ ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳು ಆಗಮಿಸುತ್ತಿದ್ದು, ಭಕ್ತಸಾಗರವನ್ನು ನಿಯಂತ್ರಿಸುವುದು ಸದ್ಯ ಕೇರಳ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಇನ್ನು ಶಬರಿಮಲೆ ಕ್ಷೇತ್ರದಲ್ಲಿ ಭಕ್ತರದಟ್ಟಣೆ ಹೆಚ್ಚಿದ್ದು ಅನೇಕ ಭಕ್ತಾದಿಗಳು ದೇವರ ದರ್ಶನ ಪಡೆಯದೇ ಹಿಂದಿರುಗುತ್ತಿರುವ ಸುದ್ದಿಗಳು ಕೇಳಿ ಬರುತ್ತಿವೆ. ಇಂದು ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡು ಮೂಲದ 12 ವರ್ಷದ ಬಾಲಕಿ ಪದ್ಮಶ್ರೀ ಎಂಬಾಕೆ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.
ದೇವಸ್ಥಾನದ ಅಪ್ಪಾಚಿಮೇಡು ಎಂಬ ಸ್ಥಳದಲ್ಲಿ ಬಾಲಕಿ ಕುಸಿದುಬಿದ್ದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಬದುಕುಳಿಯಲಿಲ್ಲ. ಬಾಲಕಿಗೆ ಈ ಹಿಂದಿನಿಂದಲೂ ಉಸಿರಾಟದ ಸಮಸ್ಯೆಯಿದ್ದು, ಮೂರು ವರ್ಷಗಳಿಂದ ಹೃದ್ರೋಗ ಚಿಕಿತ್ಸೆ ಪಡೆಯುತ್ತಿದ್ದಳು ಹಾಗೂ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು ಎನ್ನಲಾಗಿದೆ. ಬಾಲಕಿಯ ಸಾವಿನ ಬೆನ್ನಲ್ಲೇ ದೇವಾಲಯದ ಆಡಳಿತ ಮಂಡಳಿ ಹಾಗೂ ಕೇರಳ ರಾಜ್ಯ ಸರ್ಕಾರದ ವಿರುದ್ಧ ಯಾತ್ರಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…