ರಾಷ್ಟ್ರೀಯ

ಶಬರಿಮಲೆಗೆ ಬಂದಿದ್ದ ಬಾಲಕಿ ಸರತಿ ಸಾಲಿನಲ್ಲೇ ಸಾವು; ಆಕ್ರೋಶ ಹೊರಹಾಕಿದ ಯಾತ್ರಾರ್ಥಿಗಳು

ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಬರಿಮಲೆಗೆ ಬರುವ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಡಿಸೆಂಬರ್‌ 6ರಿಂದ ಪ್ರತಿದಿನ ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳು ಆಗಮಿಸುತ್ತಿದ್ದು, ಭಕ್ತಸಾಗರವನ್ನು ನಿಯಂತ್ರಿಸುವುದು ಸದ್ಯ ಕೇರಳ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇನ್ನು ಶಬರಿಮಲೆ ಕ್ಷೇತ್ರದಲ್ಲಿ ಭಕ್ತರದಟ್ಟಣೆ ಹೆಚ್ಚಿದ್ದು ಅನೇಕ ಭಕ್ತಾದಿಗಳು ದೇವರ ದರ್ಶನ ಪಡೆಯದೇ ಹಿಂದಿರುಗುತ್ತಿರುವ ಸುದ್ದಿಗಳು ಕೇಳಿ ಬರುತ್ತಿವೆ. ಇಂದು ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡು ಮೂಲದ 12 ವರ್ಷದ ಬಾಲಕಿ ಪದ್ಮಶ್ರೀ ಎಂಬಾಕೆ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.

ದೇವಸ್ಥಾನದ ಅಪ್ಪಾಚಿಮೇಡು ಎಂಬ ಸ್ಥಳದಲ್ಲಿ ಬಾಲಕಿ ಕುಸಿದುಬಿದ್ದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಬದುಕುಳಿಯಲಿಲ್ಲ. ಬಾಲಕಿಗೆ ಈ ಹಿಂದಿನಿಂದಲೂ ಉಸಿರಾಟದ ಸಮಸ್ಯೆಯಿದ್ದು, ಮೂರು ವರ್ಷಗಳಿಂದ ಹೃದ್ರೋಗ ಚಿಕಿತ್ಸೆ ಪಡೆಯುತ್ತಿದ್ದಳು ಹಾಗೂ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು ಎನ್ನಲಾಗಿದೆ. ಬಾಲಕಿಯ ಸಾವಿನ ಬೆನ್ನಲ್ಲೇ ದೇವಾಲಯದ ಆಡಳಿತ ಮಂಡಳಿ ಹಾಗೂ ಕೇರಳ ರಾಜ್ಯ ಸರ್ಕಾರದ ವಿರುದ್ಧ ಯಾತ್ರಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

16 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago