ರಾಷ್ಟ್ರೀಯ

ತಮಿಳುನಾಡು: 15 ಮಾಜಿ ಶಾಸಕರು ಬಿಜೆಪಿ ಸೇರ್ಪಡೆ

ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದು, ಇದರ ಉದ್ದೇಶವಾಗಿ ತಮಿಳುನಾಡಿನಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ 15 ಮುಖಂಡರನ್ನು ಇಂದು ( ಫೆಬ್ರವರಿ 7 ) ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಈ ಪೈಕಿ ಹೆಚ್ಚಿನ ನಾಯಕರು ಎಐಎಡಿಎಂಕೆ ಪಕ್ಷದವರಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮತ್ತು ಎಲ್.‌ ಮುರುಗನ್‌ ಅವರ ನೇತೃತ್ವದಲ್ಲಿ ಈ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಮಲೈ ಮೂರನೇ ಅವಧಿಗೆ ಮತ್ತೊಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರಲು, ಬಿಜೆಪಿಗೆ ಸೇರಿರುವ ಎಲ್ಲಾ ನಾಯಕರು ಅನುಭವ ಉಳ್ಳವರಾಗಿರುವುದರಿಂದ ಅನುಕೂಲವಾಗುತ್ತದೆ ಎಂದರು. ಡಿಎಂಕೆ ಪಕ್ಷದಿಂದ ತಮಿಳುನಾಡಿನಲ್ಲಿ ಆಗುತ್ತಿರುವ ವಿದ್ಯಮಾನಗಳನ್ನು ಜನರು ಗಮನಿಸುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಾದೇಶಿಕ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯು ಈ ರಾಜ್ಯದಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿಲ್ಲದಿದ್ದರೂ ಮೋದಿಯವರ 10 ವರ್ಷಗಳ ಆಡಳಿತಾವಧಿಯಲ್ಲಿ ನಡೆದಿರುವ ಬದಲಾವಣೆಗಳನ್ನು ನೋಡಿ ಎಲ್ಲಾ ನಾಯಕರು ಬಿಜೆಪಿಗೆ ಸೇರಿರುವುದನ್ನು ಗಮನಿಸಿದರೆ, ಜನರು ಮೋದಿಯರೇ ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಚಂದ್ರಶೇಖರ್‌ ಭರವಸೆಯ ಮಾತುಗಳನ್ನಾಡಿದರು.

ಮೋದಿಯವರ ಭವಿಷ್ಯ ನುಡಿಯ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು 370 ಸೀಟುಗಳನ್ನು ಗೆದ್ದರೆ, ಎನ್‌ಡಿಎ 400 ಸೀಟುಗಳನ್ನು ದಾಟಲಿದೆ ಅದರಲ್ಲಿ ತಮಿಳುನಾಡಿನಿಂದ ಹೆಚ್ಚು ಸ್ಥಾನ ಬರಲಿವೆ ಎಂದು ಚಂದ್ರಶೇಖರ್‌ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

andolana

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago