ರಾಷ್ಟ್ರೀಯ

ತಮಿಳುನಾಡು: 15 ಮಾಜಿ ಶಾಸಕರು ಬಿಜೆಪಿ ಸೇರ್ಪಡೆ

ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದು, ಇದರ ಉದ್ದೇಶವಾಗಿ ತಮಿಳುನಾಡಿನಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ 15 ಮುಖಂಡರನ್ನು ಇಂದು ( ಫೆಬ್ರವರಿ 7 ) ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಈ ಪೈಕಿ ಹೆಚ್ಚಿನ ನಾಯಕರು ಎಐಎಡಿಎಂಕೆ ಪಕ್ಷದವರಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮತ್ತು ಎಲ್.‌ ಮುರುಗನ್‌ ಅವರ ನೇತೃತ್ವದಲ್ಲಿ ಈ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಮಲೈ ಮೂರನೇ ಅವಧಿಗೆ ಮತ್ತೊಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರಲು, ಬಿಜೆಪಿಗೆ ಸೇರಿರುವ ಎಲ್ಲಾ ನಾಯಕರು ಅನುಭವ ಉಳ್ಳವರಾಗಿರುವುದರಿಂದ ಅನುಕೂಲವಾಗುತ್ತದೆ ಎಂದರು. ಡಿಎಂಕೆ ಪಕ್ಷದಿಂದ ತಮಿಳುನಾಡಿನಲ್ಲಿ ಆಗುತ್ತಿರುವ ವಿದ್ಯಮಾನಗಳನ್ನು ಜನರು ಗಮನಿಸುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಾದೇಶಿಕ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯು ಈ ರಾಜ್ಯದಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿಲ್ಲದಿದ್ದರೂ ಮೋದಿಯವರ 10 ವರ್ಷಗಳ ಆಡಳಿತಾವಧಿಯಲ್ಲಿ ನಡೆದಿರುವ ಬದಲಾವಣೆಗಳನ್ನು ನೋಡಿ ಎಲ್ಲಾ ನಾಯಕರು ಬಿಜೆಪಿಗೆ ಸೇರಿರುವುದನ್ನು ಗಮನಿಸಿದರೆ, ಜನರು ಮೋದಿಯರೇ ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಚಂದ್ರಶೇಖರ್‌ ಭರವಸೆಯ ಮಾತುಗಳನ್ನಾಡಿದರು.

ಮೋದಿಯವರ ಭವಿಷ್ಯ ನುಡಿಯ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು 370 ಸೀಟುಗಳನ್ನು ಗೆದ್ದರೆ, ಎನ್‌ಡಿಎ 400 ಸೀಟುಗಳನ್ನು ದಾಟಲಿದೆ ಅದರಲ್ಲಿ ತಮಿಳುನಾಡಿನಿಂದ ಹೆಚ್ಚು ಸ್ಥಾನ ಬರಲಿವೆ ಎಂದು ಚಂದ್ರಶೇಖರ್‌ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

6 hours ago