ರಾಷ್ಟ್ರೀಯ

ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ: ಅಮಿತ್‌ ಶಾ ಹೇಳಿಕೆಗೆ ಸಿಎಂ ಕಿಡಿ

ಬೆಂಗಳೂರು: ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಲು ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಗ್ಯಾರೆಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ಅಮಿತ್‌ ಶಾ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು,

ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಟ್ವೀಟ್‌ನಲ್ಲೇನಿದೆ?

ಗ್ಯಾರೆಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ಅಮಿತ್‌ ಶಾ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ?

ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿಶ್‌ ಶಾ ಅವರು ‘‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ.

ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು “ಗರೀಬಿ ಹಟಾವೋ” ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು.

ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು.

ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡ್‌ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದೆ. ನಾವು ಕೆ.ಜಿ ಗೆ ರೂ.33 ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕೆ.ಜಿ ಗೆ ರೂ.29ರಂತೆ ಮಾರಾಟ ಮಾಡುತ್ತಿದೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ.

ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು. ಕೇಂದ್ರ ಬಿಜೆಪಿ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ.

ಬಡವರ ಕಷ್ಟ ಕಡಿಮೆ ಮಾಡುವ, ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಿಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕಟ್ಟಿ ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

andolanait

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

36 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

42 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago