ಕಳೆದ ವಾರ ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಾಗಿದೆ. ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ನಿನ್ನೆ ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಎರಡೇ ದಿನಗಳಲ್ಲಿ ಒಟ್ಟು 141 ಸಂಸದರ ಅಮಾನತು ಜರುಗಿತ್ತು.
ಇದೀಗ ಇಂದು ( ಡಿಸೆಂಬರ್ 20 ) ಮತ್ತಿಬ್ಬರು ಸಂಸದರ ಅಮಾನತಾಗಿದ್ದು, ಅಮಾನತಾದ ಸಂಸದರ ಸಂಖ್ಯೆ 143ಕ್ಕೆ ಏರಿಕೆ ಕಂಡಿದೆ. ಸೋಮವಾರ 92 ಸದಸ್ಯರ ಅಮಾನತಾಗಿರುವುದು ಇತಿಹಾಸದಲ್ಲಿಯೇ ದಿನವೊಂದರಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಅಮಾನತಾದ ದಾಖಲೆ ಬರೆದಿದೆ. 1989ರಲ್ಲಿ ಒಂದೇ ದಿನ ಒಟ್ಟು 63 ಸಂಸದರ ಸಂಸದರನ್ನು ಅಮಾನತು ಮಾಡಲಾಗಿತ್ತು. ನಿನ್ನೆ ನಡೆದ ಅಮಾನತು ಪ್ರಕ್ರಿಯೆ ಈ ದಾಖಲೆಯನ್ನು ಹಿಂದಿಕ್ಕಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…