ನೂತನ ಸಂಸತ್ ಭವನದ ಭದ್ರತಾ ಲೋಪದ ಕುರಿತಾಗಿ ಗುರುವಾರ ಮೂವರು ಸಂಸದರ ಅಮಾನತ್ತು ಜರುಗಿದ್ದು, ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸೇರಿದಂತೆ ಒಟ್ಟು ಮೂವರು ಸಂಸದರ ಅಮಾನತ್ತಾಗಿದೆ.
ಭದ್ರತಾ ಲೋಪವನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರಣ ಈ ಸಂಸದರ ಅಮಾನತ್ತಾಗಿದೆ ಎಂದು ತಿಳಿದುಬಂದಿದ್ದು, ಪ್ರಹ್ಲಾದ್ ಜೋಶಿ ಅಮಾನತು ಪ್ರಸ್ತಾವನೆ ಮಂಡಿಸಿದ್ದರು ಎನ್ನಲಾಗಿದೆ.
ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಮಂಗಳವಾರ ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಬುಧವಾರ ಕೇರಳದ ಇಬ್ಬರು ಸಂಸದರ ಅಮಾನತು ಜರುಗಿತು. ಇಂದು ಮೂವರ ಅಮಾನತ್ತಾಗಿದ್ದು ಸದ್ಯ ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ.
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…